ಬ್ರೇಕಿಂಗ್ ನ್ಯೂಸ್
30-09-22 05:02 pm HK News Desk ದೇಶ - ವಿದೇಶ
ಕಾಬೂಲ್, ಸೆ.30 : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಶಿಕ್ಷಣ ಕೇಂದ್ರದ ಆವರಣದಲ್ಲಿ ಬಾಂಬ್ ಸ್ಫೋಟ ಆಗಿದ್ದು 23 ಮಂದಿ ಸಾವನ್ನಪ್ಪಿದ್ದಾರೆ.
ಕಾಬೂಲ್ ಬಳಿಯ ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಹದಿಹರೆಯದ ಹೆಣ್ಮಕ್ಕಳಿದ್ದಾರೆ. ಶಿಕ್ಷಣ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ 7.30ರ ವೇಳೆಗೆ ವಿದ್ಯಾರ್ಥಿಗಳು ಯುನಿವರ್ಸಿಟಿ ಅರ್ಹತಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾಗ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿದ್ದಾನೆ. 23 ಮಂದಿ ಸಾವನ್ನಪ್ಪಿದ್ದು, 36 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಆತ್ಮಹತ್ಯಾ ಬಾಂಬ್ ದಾಳಿ ನಡೆಸಿರುವ ಗುಂಪು ಯಾರದ್ದು ಎನ್ನುವುದು ತಿಳಿದುಬಂದಿಲ್ಲ. ಕಾಜ್ ಎಜುಕೇಶನ್ ಸೆಂಟರ್ ನಲ್ಲಿ ಹೆಚ್ಚಿನವರು ಹಜಾರಾ ಎನ್ನುವ ಮುಸ್ಲಿಮರಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರು ಕಲಿಯುತ್ತಿದ್ದರು. ಹಜಾರಾ ಕಮ್ಯುನಿಟಿಯನ್ನು ಗುರಿಯಾಗಿಸಿ ಐಸಿಸ್ ಖೊರಸಾನ್ ಉಗ್ರರು ಈ ಹಿಂದೆಯೂ ದಾಳಿ ನಡೆಸಿದ್ದರು. ಅಫ್ಘಾನಿಸ್ತಾನ ಆಡಳಿತವು ಬಾಂಬ್ ದಾಳಿ ಘಟನೆಯನ್ನು ಖಂಡಿಸಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಅಮೆರಿಕ ಕೂಡ ಘಟನೆಯನ್ನು ಖಂಡಿಸಿದ್ದು ವಿದ್ಯಾರ್ಥಿಗಳು ಕೊಠಡಿಯಲ್ಲಿರುವಾಗ ಅವರನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುವುದು ಅತ್ಯಂತ ಹೀನಾಯ ಮತ್ತು ಘೋರ ಕೃತ್ಯ ಎಂದು ಹೇಳಿದೆ.
A suicide bomb attack on an education center in Kabul has killed at least 23 people, most of whom are believed to be young women, in the latest sign of the deteriorating security situation in the Afghan capital.The explosion took place on Friday at the Kaaj education center, in a predominantly Hazara neighborhood – an ethnic minority group that has long faced oppression.Students were taking a practice university entrance exam at 7:30 a.m., local time (11 p.m. ET) when the blast first took place, Kabul Police Spokesman Khalid Zadran told CNN.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm