ಬ್ರೇಕಿಂಗ್ ನ್ಯೂಸ್
09-10-20 05:14 pm Headline Karnataka News Network ದೇಶ - ವಿದೇಶ
ಜೈಪುರ, ಅಕ್ಟೋಬರ್ 09: ಜಾಗದ ವಿವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕರೊಬ್ಬರನ್ನು ಜೀವಂತವಾಗಿ ಸುಟ್ಟು ಕೊಂದ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಕರೌಲಿ ಜಿಲ್ಲೆಯ ಸಪೋತ್ರಾ ತಾಲೂಕಿನ ಬುಕ್ನಾ ಗ್ರಾಮದಲ್ಲಿ ಬುಧವಾರ ಘಟನೆ ನಡೆದಿದ್ದು, ತೀವ್ರ ಸುಟ್ಟ ಗಾಯಗಳಾಗಿದ್ದ ಅರ್ಚಕ ಬಾಬುಲಾಲ್ ವೈಷ್ಣವ್ (55) ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಪ್ರಮುಖ ಆರೋಪಿಯಾಗಿರುವ ಕೈಲಾಶ್ ಮೀನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾಶ್ ಮೀನಾ ಒಬ್ಬನ ಕೃತ್ಯ ಅಲ್ಲ. ಆತನ ಇಡೀ ಕುಟುಂಬ ಕೃತ್ಯದಲ್ಲಿ ಭಾಗಿಯಾಗಿದೆ. ಬ್ರಾಹ್ಮಣ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ. ಮೀನಾ ಕುಟುಂಬದ ಎಲ್ಲರನ್ನೂ ಬಂಧಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದು ಅರ್ಚಕರ ಸಂಬಂಧಿ ರಮಾಕಾಂತ್ ಶರ್ಮಾ ಆಗ್ರಹಿಸಿದ್ದಾರೆ.

ಬುಕ್ನಾ ಗ್ರಾಮದ ರಾಧಾಕೃಷ್ಣ ದೇವಾಲಯದ ಟ್ರಸ್ಟ್ ಗೆ ಸೇರಿದ 5.2 ಎಕ್ರೆ ಭೂಮಿಯನ್ನು ದೇಗುಲದ ಪ್ರಧಾನ ಅರ್ಚಕ ಬಾಬುಲಾಲ್ ವೈಷ್ಣವ್ ನೋಡಿಕೊಂಡಿದ್ದರು. ಆದರೆ, ಅರ್ಚಕ ಬಾಬುಲಾಲ್ ಇತ್ತೀಚೆಗೆ ಭೂಮಿಯ ಒಂದು ಭಾಗವನ್ನು ಲೆವೆಲ್ ಮಾಡಿ ಬಿಲ್ಡಿಂಗ್ ಕಟ್ಟಲು ತಯಾರಿ ನಡೆಸಿದ್ದರು. ಇದಕ್ಕೆ ಒಂದು ಗುಂಪಿನವರು ವಿರೋಧ ವ್ಯಕ್ತಪಡಿಸಿದ್ದರು. ಈ ಭೂಮಿಯಲ್ಲಿ ತಮ್ಮದೂ ಪಾಲಿದೆ, ಬಿಲ್ಡಿಂಗ್ ಕಟ್ಟುವಂತಿಲ್ಲ ವಿರೋಧಿಸುತ್ತಿದ್ದರು. ಈ ವಿಚಾರ ಬಳಿಕ ಗ್ರಾಮದ ಹಿರಿಯರ ಮುಂದೆ ಬಂದಿತ್ತು. ಗ್ರಾಮದ ಹಿರಿಯರೆಲ್ಲ ಸೇರಿ ಅದನ್ನು ಅರ್ಚಕರಿಗೇ ಒಪ್ಪಿಸಿದ್ದರಲ್ಲದೆ, ಕಟ್ಟಡ ಕಟ್ಟುವುದಕ್ಕೆ ಒಪ್ಪಿಗೆ ಸೂಚಿಸಿದ್ದರು. ಕಟ್ಟಡದ ಕೆಲಸ ನಡೆಯುತ್ತಿದ್ದಂತೆ ಕೈಲಾಶ್ ಮೀನಾ ಮತ್ತು ನಾಲ್ವರು ಅರ್ಚಕನ ಮನೆಗೆ ಬಂದು ವಾಗ್ವಾದ ನಡೆಸಿದ್ದಾರೆ. ಒಬ್ಬಾತ ಕೈಯಲ್ಲಿದ್ದ ಮೈಗೆ ಸೀಮೆ ಎಣ್ಣೆಯನ್ನು ಅರ್ಚಕರ ಮೈಗೆ ಸುರಿದು ಬೆಂಕಿ ಹಚ್ಚಿದ್ದಾರೆ. ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದನ್ನು ಅರ್ಚಕ ಸಾಯುವುದಕ್ಕೂ ಮುನ್ನ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರ್ಚಕರ ಹತ್ಯೆ ವಿಚಾರ ರಾಜಸ್ಥಾನದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದು, ಬಿಜೆಪಿ ನಾಯಕರು ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಮಾಜಿ ಸಿಎಂ ವಸುಂಧರಾ ರಾಜೇ ಸಿಂಧ್ಯಾ, ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.
A priest in Rajasthan's Karauli district, round 177 km from state capital Jaipur, died due to burn injuries after he was attacked by a group of people over a land dispute.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am