ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm