ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm