ಬ್ರೇಕಿಂಗ್ ನ್ಯೂಸ್
09-10-20 09:12 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 9: ರಿಪಬ್ಲಿಕ್ ಟಿವಿ ವಿರುದ್ಧ ಟಿಆರ್ ಪಿ ಗೋಲ್ಮಾಲ್ ಮಾಡಿರುವ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಮುಂಬೈ ಪೊಲೀಸ್ ಕಮೀಷನರ್ ಪರಮ್ ಬೀರ್ ಸಿಂಗ್ ಹೇಳಿಕೆ ನೀಡಿದ್ದರು. ಆದರೆ, ಈ ಪ್ರಕರಣದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ದೂರು ದಾಖಲಾಗಿರುವುದು ಇಂಡಿಯಾ ಟುಡೇ ನ್ಯೂಸ್ ಚಾನೆಲ್ ವಿರುದ್ಧ ಎನ್ನುವ ಮಾಹಿತಿ ಹೊರಬಿದ್ದಿದೆ.
ಮುಂಬೈನ ಖಾಂಡಿವಿಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇಂಡಿಯಾ ಟುಡೇ ನ್ಯೂಸ್ ಮತ್ತಿತರ ವಾಹಿನಿಗಳ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಉಲ್ಲೇಖ ಇದೆ. ಬಾರ್ಕ್ ರೇಟಿಂಗ್ ಮಾನಿಟರಿಂಗ್ ಮಾಡುವ ಹನ್ಸ್ ರೀಸರ್ಚ್ ಸೆಂಟರ್ ಕಂಪನಿ ದೂರು ನೀಡಿದ್ದು, ಕಂಪೆನಿಯ ಮಾಜಿ ಉದ್ಯೋಗಿ ವಿಶಾಲ್ ಭಂಡಾರಿ ಹಣ ಪಡೆದು ಟಿಆರ್ ಪಿ ಹೆಚ್ಚಿಸಲು ತಂತ್ರ ಹೂಡಿದ್ದ. ಇದಕ್ಕಾಗಿ ಇಂಡಿಯಾ ಟುಡೇ ವಾಹಿನಿಯಿಂದ ಹಣವನ್ನು ಪಡೆಯುತ್ತಿದ್ದ ಎಂದು ಆರೋಪಿಸಿದೆ.

ಹನ್ಸ್ ರೀಸರ್ಚ್ ಸೆಂಟರ್ ಡೆಪ್ಯುಟಿ ಜನರಲ್ ಮ್ಯಾನೇಜರ್ ನಿತಿನ್ ದೇವ್ಕರ್ ಈ ದೂರು ನೀಡಿದ್ದು, ದೂರಿನಲ್ಲಿ ಸ್ಪಷ್ಟವಾಗಿ ಇಂಡಿಯಾ ಟುಡೇ ಮತ್ತಿತರ ನ್ಯೂಸ್ ಚಾನೆಲ್ ಎಂದು ಹೇಳಿದ್ದಾರೆ. ಹೀಗಾಗಿ ಮುಂಬೈ ಪೊಲೀಸ್ ಕಮಿಷನರ್ ಉದ್ದೇಶಪೂರ್ವಕವಾಗಿ ರಿಪಬ್ಲಿಕ್ ಟಿವಿ ಹೆಸರು ಹೇಳಿದ್ದಾರೆಯೇ ಎಂಬ ಶಂಕೆ ಮೂಡಿದೆ. ಈ ವಿಚಾರದಲ್ಲಿ ರಿಪಬ್ಲಿಕ್ ಟಿವಿ ಮಾಲಕ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ನಿರಂತರ ಸುದ್ದಿ ಮಾಡಿದ್ದ ರಿಪಬ್ಲಿಕ್ ಟಿವಿ ಮುಂಬೈ ಪೊಲೀಸರ ನಿದ್ದೆಗೆಡಿಸಿದ್ದರು. ಮುಂಬೈ ಪೊಲೀಸರು, ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಸರಕಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದರು. ಇದೇ ಕಾರಣಕ್ಕೆ ಟಿಆರ್ ಪಿ ಸ್ಕ್ಯಾಮ್ ನಲ್ಲಿ ರಿಪಬ್ಲಿಕ್ ಟಿವಿಯನ್ನು ಮುಂಬೈ ಪೊಲೀಸರು ಆರೋಪಿಯಾಗಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಎಫ್ಐಆರ್ ಪ್ರತಿಯಲ್ಲಿ ರಿಪಬ್ಲಿಕ್ ಟಿವಿ ಹೆಸರು ಉಲ್ಲೇಖ ಆಗದಿರುವುದು ಮತ್ತು ಅಲ್ಲಿ ಇಂಡಿಯಾ ಟುಡೇ ಹೆಸರು ಮಾತ್ರ ಉಲ್ಲೇಖ ಆಗಿರುವುದು ಸಂಶಯ ಮೂಡಿಸಿದೆ.
The 'fake TRP scam' took a new turn with the Mumbai police confirming that the First Information Report filed on October 6 had a witness mentioning that he was offered money to view India Today channel and not Republic Tv.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm