ಬ್ರೇಕಿಂಗ್ ನ್ಯೂಸ್
09-10-20 09:12 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 9: ರಿಪಬ್ಲಿಕ್ ಟಿವಿ ವಿರುದ್ಧ ಟಿಆರ್ ಪಿ ಗೋಲ್ಮಾಲ್ ಮಾಡಿರುವ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಮುಂಬೈ ಪೊಲೀಸ್ ಕಮೀಷನರ್ ಪರಮ್ ಬೀರ್ ಸಿಂಗ್ ಹೇಳಿಕೆ ನೀಡಿದ್ದರು. ಆದರೆ, ಈ ಪ್ರಕರಣದಲ್ಲಿ ದಾಖಲಾದ ಎಫ್ಐಆರ್ ಪ್ರಕಾರ, ದೂರು ದಾಖಲಾಗಿರುವುದು ಇಂಡಿಯಾ ಟುಡೇ ನ್ಯೂಸ್ ಚಾನೆಲ್ ವಿರುದ್ಧ ಎನ್ನುವ ಮಾಹಿತಿ ಹೊರಬಿದ್ದಿದೆ.
ಮುಂಬೈನ ಖಾಂಡಿವಿಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇಂಡಿಯಾ ಟುಡೇ ನ್ಯೂಸ್ ಮತ್ತಿತರ ವಾಹಿನಿಗಳ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಉಲ್ಲೇಖ ಇದೆ. ಬಾರ್ಕ್ ರೇಟಿಂಗ್ ಮಾನಿಟರಿಂಗ್ ಮಾಡುವ ಹನ್ಸ್ ರೀಸರ್ಚ್ ಸೆಂಟರ್ ಕಂಪನಿ ದೂರು ನೀಡಿದ್ದು, ಕಂಪೆನಿಯ ಮಾಜಿ ಉದ್ಯೋಗಿ ವಿಶಾಲ್ ಭಂಡಾರಿ ಹಣ ಪಡೆದು ಟಿಆರ್ ಪಿ ಹೆಚ್ಚಿಸಲು ತಂತ್ರ ಹೂಡಿದ್ದ. ಇದಕ್ಕಾಗಿ ಇಂಡಿಯಾ ಟುಡೇ ವಾಹಿನಿಯಿಂದ ಹಣವನ್ನು ಪಡೆಯುತ್ತಿದ್ದ ಎಂದು ಆರೋಪಿಸಿದೆ.

ಹನ್ಸ್ ರೀಸರ್ಚ್ ಸೆಂಟರ್ ಡೆಪ್ಯುಟಿ ಜನರಲ್ ಮ್ಯಾನೇಜರ್ ನಿತಿನ್ ದೇವ್ಕರ್ ಈ ದೂರು ನೀಡಿದ್ದು, ದೂರಿನಲ್ಲಿ ಸ್ಪಷ್ಟವಾಗಿ ಇಂಡಿಯಾ ಟುಡೇ ಮತ್ತಿತರ ನ್ಯೂಸ್ ಚಾನೆಲ್ ಎಂದು ಹೇಳಿದ್ದಾರೆ. ಹೀಗಾಗಿ ಮುಂಬೈ ಪೊಲೀಸ್ ಕಮಿಷನರ್ ಉದ್ದೇಶಪೂರ್ವಕವಾಗಿ ರಿಪಬ್ಲಿಕ್ ಟಿವಿ ಹೆಸರು ಹೇಳಿದ್ದಾರೆಯೇ ಎಂಬ ಶಂಕೆ ಮೂಡಿದೆ. ಈ ವಿಚಾರದಲ್ಲಿ ರಿಪಬ್ಲಿಕ್ ಟಿವಿ ಮಾಲಕ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ನಿರಂತರ ಸುದ್ದಿ ಮಾಡಿದ್ದ ರಿಪಬ್ಲಿಕ್ ಟಿವಿ ಮುಂಬೈ ಪೊಲೀಸರ ನಿದ್ದೆಗೆಡಿಸಿದ್ದರು. ಮುಂಬೈ ಪೊಲೀಸರು, ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಮಹಾರಾಷ್ಟ್ರ ಸರಕಾರದ ಅಣತಿಯಂತೆ ಪೊಲೀಸರು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದರು. ಇದೇ ಕಾರಣಕ್ಕೆ ಟಿಆರ್ ಪಿ ಸ್ಕ್ಯಾಮ್ ನಲ್ಲಿ ರಿಪಬ್ಲಿಕ್ ಟಿವಿಯನ್ನು ಮುಂಬೈ ಪೊಲೀಸರು ಆರೋಪಿಯಾಗಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಎಫ್ಐಆರ್ ಪ್ರತಿಯಲ್ಲಿ ರಿಪಬ್ಲಿಕ್ ಟಿವಿ ಹೆಸರು ಉಲ್ಲೇಖ ಆಗದಿರುವುದು ಮತ್ತು ಅಲ್ಲಿ ಇಂಡಿಯಾ ಟುಡೇ ಹೆಸರು ಮಾತ್ರ ಉಲ್ಲೇಖ ಆಗಿರುವುದು ಸಂಶಯ ಮೂಡಿಸಿದೆ.
The 'fake TRP scam' took a new turn with the Mumbai police confirming that the First Information Report filed on October 6 had a witness mentioning that he was offered money to view India Today channel and not Republic Tv.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am