ಬ್ರೇಕಿಂಗ್ ನ್ಯೂಸ್
03-10-22 01:10 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.3 : ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದರೆ, ಗೋವುಗಳನ್ನು ಸಾಕುವವರಿಗೆ ಒಂದು ಗೋವಿಗೆ ಪ್ರತಿ ದಿನ ರೂ. 40 ನೆರವು ನೀಡುವುದಾಗಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಹಾಲು ಕರೆಯದ ಹಾಗೂ ಬೀಡಾಡಿ ಗೋವುಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಗೋಶಾಲೆಯನ್ನು ನಿರ್ಮಿಸುವುದಾಗಿಯೂ ಭರವಸೆ ನೀಡಿದ್ದಾರೆ.
ಆಡಳಿತ ಪಕ್ಷ ಬಿಜೆಪಿಯ 'ಗೋ ಸಂರಕ್ಷಣೆ' ನೀತಿಗೆ ಅದೇ ದಾಟಿಯಲ್ಲೇ ತಿರುಗೇಟು ನೀಡಿದ ಕೇಜ್ರಿವಾಲ್, ಹಿಂದೂ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, 'ಗೋವುಗಳ ಸಂರಕ್ಷಣೆಗಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದರು.
ಗೋಶಾಲೆಗಳ ಅಭಿವೃದ್ಧಿಗಾಗಿ ಗುಜರಾತ್ ಬಿಜೆಪಿ ಸರ್ಕಾರ ಹಣ ಮೀಸಲಿರಿಸಿದೆ. ಆದರೆ, ಈ ಹಣವನ್ನು ಬಿಡುಗಡೆ ಮಾಡಿಲ್ಲ. ಆದ್ದರಿಂದ ಗೋಶಾಲೆಯ ಮಾಲೀಕರು ರಾಜ್ಯದಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ, ಕೇಜ್ರಿವಾಲ್ ಅವರ ಈ ಘೋಷಣೆಗಳು ಮಹತ್ವ ಪಡೆದುಕೊಂಡಿದೆ.
ಯಾರು ಊಟಕ್ಕೆ ಕರೆದರೂ ಹೋಗುತ್ತೇನೆ
ಅಹಮದಾಬಾದ್ನ ಆಟೋ ಚಾಲಕರೊಬ್ಬರ ಮನೆಗೆ ಕೇಜ್ರಿವಾಲ್ ಅವರು ರಾತ್ರಿ ಊಟಕ್ಕೆ ಹೋಗಿದ್ದರು. ಆದರೆ, ಆ ಚಾಲಕ ಬಿಜೆಪಿ ಬೆಂಬಲಿಗ ಎಂದು ನಂತರ ತಿಳಿದುಬಂದಿತ್ತು. ಈ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ವ್ಯಕ್ತಿಗಳನ್ನು ಅವರು ಬೆಂಬಲಿಸುವ ಪಕ್ಷದ ಆಧಾರದಲ್ಲಿ ನಾನು ತಾರತಮ್ಯ ಮಾಡುವುದಿಲ್ಲ. ಅವರು ನನ್ನ ಪಕ್ಷಕ್ಕೆ ಮತ ನೀಡಲಿ, ಬಿಡಲಿ. ಅದು ಅವರ ನಿರ್ಧಾರ. ಆದರೆ, ಯಾರೇ ನನ್ನನ್ನು ಮನೆಗೆ ಊಟಕ್ಕೆ ಕರೆದರೂ ಹೋಗುತ್ತೇನೆ' ಎಂದರು.
Delhi Chief Minister Arvind Kejriwal on Sunday promised Rs 40 per day for the upkeep of every cow in Gujarat and a shelter home for non-milching cattle in every district of the state if the Aam Aadmi Party is voted to power.The Aam Aadmi Party national convener also claimed that the BJP and opposition Congress have united to 'cut into the AAP votes' as according to an 'IB report,' his party will form the next government in the state.Kejriwal's announcement is a renewed push to counter the ruling BJP in Gujarat and attract Hindu voters, as per political experts.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm