ಬ್ರೇಕಿಂಗ್ ನ್ಯೂಸ್
04-10-22 05:04 pm HK News Desk ದೇಶ - ವಿದೇಶ
ಹೈದರಾಬಾದ್, ಅ.4: ಪಾಕಿಸ್ಥಾನದ ಐಎಸ್ಐ ಸೂಚನೆಯಂತೆ ಹೈದರಾಬಾದ್ ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಹವಣಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ಝಾಯೇದ್, ಮೊಹಮ್ಮದ್ ಸಮೀಯುದ್ದೀನ್, ಮಾಝ್ ಹಸನ್ ಫಾರೂಕ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಬಾಂಬ್ ಬ್ಲಾಸ್ಟ್ ಅಥವಾ ಸುಸೈಡ್ ದಾಳಿ ನಡೆಸಲು ಸಂಚು ಹೂಡಿದ್ದರು. ಅವರಿಂದ ನಾಲ್ಕು ಹ್ಯಾಂಡ್ ಗ್ರೆನೇಡ್ ಮತ್ತು 5.41 ಲಕ್ಷ ರೂ. ನಗದು ಹಾಗೂ ಒಂದು ಮೋಟರ್ ಸೈಕಲನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ ಆನಂದ್ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪೊಲೀಸರು ಪಾಲಕ್ ಪೇಟ್ ಎಂಬಲ್ಲಿಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪೈಕಿ ಅಬ್ದುಲ್ ಝಾಯೇದ್ ಈ ಹಿಂದೆಯೂ ಉಗ್ರವಾದಿ ಸಂಬಂಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ. 2005ರಲ್ಲಿ ಹೈದರಾಬಾದಿನ ಸಿಟಿ ಪೊಲೀಸ್ ಕಮಿಷನರೇಟ್ ಕಚೇರಿಯ ಟಾಸ್ಕ್ ಫೋರ್ಸ್ ಆಗಿದ್ದ ಬೇಗುಂಪೇಟ್ ನಲ್ಲಿದ್ದ ಕಚೇರಿ ಮೇಲೆ ನಡೆದಿದ್ದ ಆತ್ಮಹತ್ಯಾ ದಾಳಿ ಪ್ರಕರಣದಲ್ಲಿ ಆರೋಪಿಯಾಗಿದ್ದ. ಅಲ್ಲದೆ, ಈ ಮೂವರು ಕೂಡ ಪಾಕಿಸ್ಥಾನದ ಐಎಸ್ಐ ಏಜನ್ಸಿ ಜೊತೆ ನಿಕಟ ಸಂಪರ್ಕದಲ್ಲಿದ್ದರು. ಸದ್ಯ ಐಎಸ್ಐನಲ್ಲಿರುವ, ಮೂಲತಃ ಹೈದರಾಬಾದಿನವರಾದ ಪರ್ಹಾತುಲ್ಲಾ ಘೋರಿ, ಸಿದ್ದಿಕ್ ಬಿನ್ ಓಸ್ಮಾನ್ ಮತ್ತು ಅಬ್ದುಲ್ ಮಜೀದ್ ಅಲಿಯಾಸ್ ಚೋಟು ಎಂಬವರ ಜೊತೆ ನೇರ ಸಂಪರ್ಕದಲ್ಲಿದ್ದರು. ಇವರು ಈಗ ಪಾಕಿಸ್ತಾನದಲ್ಲಿಯೇ ಸೆಟ್ಲ್ ಆಗಿದ್ದು, ಹೈದರಾಬಾದಿನಲ್ಲಿ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.
ಈ ಹಿಂದೆ ಹೈದರಾಬಾದಿನಲ್ಲಿ ಹಲವು ಯುವಕರನ್ನು ಬ್ರೇನ್ ವಾಷ್ ಮಾಡಿ ವಿಧ್ವಂಸಕ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದ್ದರು. 2002ರಲ್ಲಿ ದಿಲ್ ಕುಶ್ ನಗರದಲ್ಲಿ ಸಾಯಿಬಾಬ್ ದೇಗುಲದ ಮೇಲಿನ ದಾಳಿ, ಮುಂಬೈನ ಘಾಟ್ ಕೋಪರ್ ನಲ್ಲಿ ಬಸ್ ಬ್ಲಾಸ್ಟ್, 2005ರಲ್ಲಿ ಬೇಗುಂಪೇಟ್ ನಲ್ಲಿ ದಾಳಿ ಪ್ರಕರಣದಲ್ಲಿ ಇವರು ಆರೋಪಿಗಳಾಗಿದ್ದರು. 2004ರಲ್ಲಿ ಸಿಕಂದರಾಬಾದ್ ನಲ್ಲಿ ಗಣೇಶ್ ದೇವಸ್ಥಾನದ ಮೇಲಿನ ದಾಳಿ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಈಗ ಬಂಧಿತನಾಗಿರುವ ಅಬ್ದುಲ್ ಝಾಯೇದ್, ಪಾಕಿಸ್ಥಾನದಲ್ಲಿರುವ ಮೂವರು ಹರಾಮಿಗಳ ಸೂಚನೆಯ ಬಗ್ಗೆ ಬಾಯಿಬಿಟ್ಟಿದ್ದಾನೆ. ಹೈದರಾಬಾದಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಆ ಮೂವರು ಹಣಕಾಸು ನೆರವು ನೀಡಿದ್ದಲ್ಲದೆ, ಯುವಕರನ್ನು ಪ್ರಚೋದಿಸಿ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಅದರಂತೆ ಸಮೀಯುದ್ದೀನ್ ಮತ್ತು ಮಾಝ್ ಹಸನ್ ಎಂಬವರನ್ನು ಕೃತ್ಯಕ್ಕಾಗಿ ಸೇರಿಸಿಕೊಂಡಿದ್ದಾಗಿ ಝಾಯೇದ್ ಪೊಲೀಸರಲ್ಲಿ ತಿಳಿಸಿದ್ದಾನೆ.
According to the preliminary information gathered by the police, Zahed was previously involved in several terror-related cases in Hyderabad including suicide attack on the Hyderabad City Police Commissioner’s task force office Begumpet in 2005The Hyderabad police on Sunday arrested three persons who were allegedly planning to carry out terror attacks in the city at the behest of Inter-Service Intelligence (ISI) of Pakistan, officials said.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm