ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.

ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm