ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.
ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm