ಬ್ರೇಕಿಂಗ್ ನ್ಯೂಸ್
04-10-22 05:55 pm HK News Desk ದೇಶ - ವಿದೇಶ
ನವದೆಹಲಿ, ಅ.4: ಉತ್ತರಾಖಂಡದಲ್ಲಿ ದಿಢೀರ್ ಹಿಮಾಪಾತ ಉಂಟಾಗಿದ್ದು ಹತ್ತು ಮಂದಿ ಪರ್ವತಾರೋಹಿಗಳು ಸಾವು ಕಂಡಿದ್ದಾರೆ. ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯ ದ್ರೌಪದಿ ಕಾ ದಂಡ್ ಎನ್ನುವ ಶಿಖರದಲ್ಲಿ ಘಟನೆ ಸಂಭವಿಸಿದೆ.
ಪರ್ವತಾರೋಹಣದ ಬಗ್ಗೆ ತರಬೇತಿ ನೀಡುವ ಉತ್ತರಾಖಂಡದ ನೆಹರು ಇನ್ ಸ್ಟಿಟ್ಯೂಟ್ ಕೇಂದ್ರಕ್ಕೆ ಸೇರಿದ 34 ಮಂದಿ ಶಿಬರಾರ್ಥಿಗಳು ಮತ್ತು ಏಳು ಮಂದಿ ಶಿಕ್ಷಕರು ಸೇರಿ ತರಬೇತಿಗಾಗಿ ತೆರಳಿದ್ದರು. ಸೋಮವಾರ ಬೆಳಗ್ಗೆ ದಿಢೀರ್ ಹಿಮಪಾತ ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ನಾಲ್ಕು ಮಂದಿಯ ಶವ ಸಿಕ್ಕಿದೆ ಎಂದು ನೆಹರು ಇನ್ ಸ್ಟಿಟ್ಯೂಟ್ ಕೇಂದ್ರದ ಪ್ರಿನ್ಸಿಪಾಲ್ ಕರ್ನಲ್ ಅಮಿತ್ ಬಿಷ್ತ್ ತಿಳಿಸಿದ್ದಾರೆ.
ಕರ್ನಾಟಕದ ನಿವಾಸಿಗಳು ಸೇರಿದಂತೆ ವಿವಿಧ ರಾಜ್ಯಗಳ ಯುವ ಪರ್ವತಾರೋಹಿಗಳು ಚಾರಣದಲ್ಲಿದ್ದರು. 29 ಮಂದಿ ಹಿಮದ ನಡುವೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗುತ್ತಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಅನ್ನೋದು ತಿಳಿದುಬಂದಿಲ್ಲ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. 13 ಸಾವಿರ ಅಡಿ ಎತ್ತರದಲ್ಲಿ ಘಟನೆ ಸಂಭವಿಸಿದ್ದು, ಗಾಯಾಳು ಮತ್ತು ಮೃತರನ್ನು ಹೆಲಿಕಾಪ್ಟರ್ ಮೂಲಕ ಮೈಥಿಲಿ ಹೆಲಿಪ್ಯಾಡ್ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆಗೆ ಮಾತನಾಡಿದ್ದು ಸೇನೆಯ ನೆರವು ಕೇಳಿದ್ದಾರೆ. ಇಂಡೋ ಟಿಬೆಟ್ ಫೋರ್ಸ್ ಮತ್ತು ಎನ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಧಾಮಿ ತಿಳಿಸಿದ್ದಾರೆ.
Bodies of four mountaineers were found in an avalanche at Mount Draupadi Ka Danda – II peak in Uttarakhand’s Uttarkashi district on Tuesday, NIM Principal Colonel Amit Bisht said. A team of 34 trainee mountaineers and seven instructors from the Nehru Institute of Mountaineering (NIM) was caught in an avalanche while returning, NIM Principal
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm