ಬ್ರೇಕಿಂಗ್ ನ್ಯೂಸ್
04-10-22 11:02 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ.4 : 8 ತಿಂಗಳ ಮಗು ಸೇರಿ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಕ್ಯಾಲಿಫೋರ್ನಿಯಾದಲ್ಲಿ ಅಪಹರಿಸಲಾಗಿದೆ. ನಗರದ ಮರ್ಸೀಡ್ ಕೌಂಟಿ ಪ್ರದೇಶದಲ್ಲಿ ನಾಲ್ವರಿದ್ದ ಭಾರತೀಯ ಕುಟುಂಬವನ್ನು ಅಪಹರಿಸಲಾಗಿದೆ. ಹಣಕ್ಕಾಗಿಯೇ ಅಪಹರಣ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ಧಾರೆ.
36 ವರ್ಷದ ಜಸ್ದೀಪ್ ಸಿಂಗ್, ಅವರ ಪತ್ನಿ 27 ವರ್ಷದ ಜಸ್ಲೀನ್ ಕೌರ್ ಹಾಗೂ ದಂಪತಿಯ 8 ತಿಂಗಳ ಮಗು ಅರೋಹಿ ಮತ್ತು ಮಗುವಿನ ಮಾವ 39 ವರ್ಷದ ಅಮನ್ದೀಪ್ ಸಿಂಗ್ ಅಪಹರಣಕ್ಕೆ ಒಳಗಾದವರು.
ಅಪಹರಣಕಾರರು ಶಸ್ತ್ರಧಾರಿಗಳಾಗಿದ್ದರು ಎಂದು ತಿಳಿದಬಂದಿದ್ದು, ಅವರ ವರ್ತನೆಯಿಂದ ಸಂಘಟಿತ ಅಪರಾಧ ಗುಂಪಿಗೆ ಸೇರಿದವರು ಎಂಬ ಅನುಮಾನವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣಕಾರರ ಜಾಡು ಹಿಡಿದು ಶೋಧ ಕಾರ್ಯ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
2019ರಲ್ಲಿ ಕ್ಯಾಲಿಫೊರ್ನಿಯಾದಲ್ಲಿ ನೆಲೆಸಿದ್ದ ತುಷಾರ್ ಆತ್ರೆ ಎಂಬ ಭಾರತೀಯ ಮೂಲದ ಅಮೆರಿಕನ್ ಪ್ರಜೆಯನ್ನು ಅಪಹರಿಸಲಾಗಿತ್ತು. ಆದರೆ ಅಪಹರಣಗೊಂಡ ಕೆಲವೇ ಗಂಟೆಗಳಲ್ಲಿ ತುಷಾರ್ ಆತ್ರೆ ಶವ ಅವರ ಗೆಳತಿಯ ಕಾರಿನಲ್ಲಿ ಸಿಕ್ಕಿತ್ತು. ಇದೀಗ ಒಂದೇ ಕುಟುಂಬದ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಅಪಹರಿಸಲಾಗಿದ್ದು, ಆತಂಕ ಮನೆ ಮಾಡಿದೆ.
ಸದ್ಯ ಅಪಹರಣಕ್ಕೀಡಾಗಿರುವವರ ಭಾವಚಿತ್ರಗಳನ್ನು ಬಿಡುಗಡೆ ಮಾಡಿರುವ ಪೊಲೀಸರು, ಇವರ ಬಗ್ಗೆ ಯಾವುದೇ ಮಾಹಿತಿ ಇದ್ದರೂ, ಕೂಡಲೇ ತಮ್ಮನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
Authorities said that an eight-month-old baby and his Indian-origin family were among 4 people kidnapped from Merced County in California on Monday (local time).According to a report by ABC 10, the victims have been identified as 36-year-old Jasdeep Singh, 27-year-old Jasleen Kaur, their eight-month-old child Aroohi Dheri, and their uncle 39-year-old Amandeep Singh.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm