ಜಮ್ಮು ಕಾಶ್ಮೀರದಲ್ಲಿ ನಾಲ್ವರು ಜೈಶ್ ಉಗ್ರರ ಹತ್ಯೆ ; ಸಚಿವ ಅಮಿತ್ ಷಾ ಇರುವಾಗಲೇ ಕಾರ್ಯಾಚರಣೆ 

05-10-22 12:11 pm       HK News Desk   ದೇಶ - ವಿದೇಶ

ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ. 

ಶ್ರೀನಗರ, ಅ.5 : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಾಲ್ವರು ಉಗ್ರರನ್ನು ಸೇನಾ ಪಡೆ ಹೊಡೆದುರುಳಿಸಿದೆ. ಗೃಹ ಸಚಿವ ಅಮಿತ್ ಷಾ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸುವ ಸಂದರ್ಭದಲ್ಲೇ ಸೇನಾ ಪಡೆ ಮಹತ್ವದ ಕಾರ್ಯಾಚರಣೆ ನಡೆಸಿದೆ. 

ಶೋಪಿಯಾನ್ ಜಿಲ್ಲೆಯ ದ್ರಾಚ್ ಮತ್ತು ಮುಲು ಪ್ರದೇಶದಲ್ಲಿ ನಡೆದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಉಗ್ರರು ನಿಷೇಧಿತ ಜೈಶ್ ಇ- ಮಹಮ್ಮದ್ ಸಂಘಟನೆಗೆ ಸೇರಿದವರು ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. 

ಕಣಿವೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯಲ್ಲಿ ಸೇನಾ ಪಡೆ ದಾಳಿ ನಡೆಸಿತ್ತು. ಆದರೆ ಉಗ್ರರು ಪ್ರತಿದಾಳಿ ನಡೆಸಿದ್ದರಿಂದ ಸೇನಾ ಯೋಧರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ. ಮೃತ ಉಗ್ರರ ಪೈಕಿ ಹನನ್ ಬಿನ್ ಯಾಕೂಬ್ ಮತ್ತು ಜಮ್ಶೆಡ್ ಎಂಬಿಬ್ಬರು ಅ.2ರಂದು ಪುಲ್ವಾಮಾದಲ್ಲಿ ನಡೆದ ಪೊಲೀಸ್ ಅಧಿಕಾರಿ ಜಾವೇದ್ ಧರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸೆ.24ರಂದು ಪಶ್ಚಿಮ ಬಂಗಾಳದ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದರು. ಹಂತಕರ ಬಗ್ಗೆ ನಿಗಾ ಇಟ್ಟಿದ್ದ ಸೇನಾ ಪಡೆ ಹೊಂಚು ಹಾಕಿ ಹತ್ಯೆ ಮಾಡಿದೆ. 

ಸಚಿವ ಅಮಿತ್ ಷಾ ಎರಡು ದಿನಗಳ ಪ್ರವಾಸದ ನಿಮಿತ್ತ ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದು ಬುಧವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Three Jaish-e-Mohammed (JeM) terrorists and a local terrorist have been gunned down during two encounters that broke out between security forces and terrorists in Jammu and Kashmir's Shopian district late Tuesday night. One operation is underway in the Drach area, while the other one began in the Moolu area of Shopian.