ಬ್ರೇಕಿಂಗ್ ನ್ಯೂಸ್
06-10-22 01:09 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಅ. 6: ಅಮೆರಿಕದ ಕ್ಯಾಲಿಫೋರ್ನಿಯಾ ನಗರದಲ್ಲಿ ಅಪಹರಣಕ್ಕೀಡಾಗಿದ್ದ ಭಾರತ ಮೂಲದ ಕುಟುಂಬದ ನಾಲ್ವರು ಸದಸ್ಯರನ್ನು ಕೊಲೆ ಮಾಡಲಾಗಿದ್ದು ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಎಂಟು ತಿಂಗಳ ಹೆಣ್ಣು ಮಗುವನ್ನೂ ನಿರ್ದಯವಾಗಿ ಕೊಲೆ ಮಾಡಲಾಗಿದೆ.
ಎಂಟು ತಿಂಗಳ ಮಗು ಆರೂಹಿ ಧೇರಿ ಮತ್ತು ಆಕೆಯ ಪೋಷಕರಾದ 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಮತ್ತು ಸಂಬಂಧಿ 39 ವರ್ಷದ ಅಮನದೀಪ್ ಸಿಂಗ್ ಅವರನ್ನು ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಲ್ಲಿರುವ ಮನೆಯಿಂದ ಅಪಹರಿಸಲಾಗಿತ್ತು.
ಅ.5ರ ಬುಧವಾರ ಸಂಜೆ ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಪತ್ತೆಯಾಗಿವೆ. ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ಶವಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಪಹರಣದ ಬಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಜಸ್ದೀಪ್ ಸಿಂಗ್ ಮತ್ತು ಅಮನದೀಪ್ ಸಿಂಗ್ ಅವರ ಕೈಗಳನ್ನು ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯಗಳು ಸೆರೆಯಾಗಿದ್ದವು. ಕೆಲವು ಸೆಕೆಂಡುಗಳ ನಂತರ ಮಗು ಮತ್ತು ಆಕೆಯ ತಾಯಿ ಕೂಡ ಕಟ್ಟಡದಿಂದ ಹೊರಬರುವುದು ದೃಶ್ಯದಲ್ಲಿ ಕಂಡಿತ್ತು. ಕುಟುಂಬದ ಎಲ್ಲ ನಾಲ್ಕು ಸದಸ್ಯರನ್ನು ಒಂದು ಟ್ರಕ್ನಲ್ಲಿ ತುಂಬಿಸಿ ಕರೆದೊಯ್ಯಲಾಗಿತ್ತು.
ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರ ಎನ್ನಲಾದ 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊ ಎಂಬಾತನನ್ನು ಬಂಧಿಸಿದ್ದರು. ಬಂಧನದ ಸಂದರ್ಭದಲ್ಲಿ ಸಲ್ಗಾಡೊ ಆತ್ಮಹತ್ಯೆಗೂ ಪ್ರಯತ್ನಿಸಿದ್ದ. ಪೊಲೀಸರು ಬಳಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆರೋಪಿ ತಾನೇ ಕೊಲೆ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದ. ಯಾಕಾಗಿ ಕೊಲೆ ನಡೆಸಿದ್ದಾನೆಂದು ತಿಳಿದುಬಂದಿಲ್ಲ.
A baby girl, her parents and uncle who were kidnapped at gunpoint from their central California business two days ago were found dead Wednesday, the sheriff of Merced County said.“Our worst fears have been confirmed,” Sheriff Vern Warnke told reporters Wednesday night.A farmworker found the bodies close together in a Merced County orchard, he said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm