ಬ್ರೇಕಿಂಗ್ ನ್ಯೂಸ್
08-10-22 09:24 pm HK News Desk ದೇಶ - ವಿದೇಶ
ರಾಯ್ಪುರ್,ಅ.8 : ಛತ್ತೀಸ್ಗಢದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ 125 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಹೆಲಿಕಾಪ್ಟರ್ ಪ್ರಯಾಣವನ್ನು ರಾಜ್ಯ ಸರ್ಕಾರ ಮಾಡಿಸಿದೆ.
ರಾಜ್ಯದ ಟಾಪರ್ಗಳು ಹಾಗೂ ಜಿಲ್ಲೆಗಳ ಟಾಪರ್ಗಳು ಹೆಲಿಕಾಪ್ಟರ್ ಪ್ರಯಾಣ ಮಾಡಿದ್ದಾರೆ.ಮೇನಲ್ಲಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ವೇಳೆ ಹೆಚ್ಚು ಅಂಕ ಗಳಿಸಿದವರಿಗೆ ಹೆಲಿಕಾಪ್ಟರ್ ಪ್ರಯಾಣ ಮಾಡಿಸುವುದಾಗಿ ಸಿಎಂ ಭೂಪೇಶ್ ಬಘೇಲ್ ಆಶ್ವಾಸನೆ ನೀಡಿದ್ದರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗಿತ್ತು. ಎಂದು ಛತ್ತೀಸ್ಗಢ ಸಚಿವ ಪ್ರೇಮಸಾಯಿ ಸಿಂಗ್ ಟೆಕಮ್ ಹೇಳಿದ್ದಾರೆ.

ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸುವ ಅವಕಾಶ ಇದೆ ಎಂದಾಗ ಖುಷಿಯಾಗಿತ್ತು. ನಾವು ಮೊದಲ ಬಾರಿಗೆ ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ್ದೇವೆ. ತರಗತಿಯಲ್ಲಿ ಒಳ್ಳೆಯ ಅಂಕ ಗಳಿಸಲು ಸರ್ಕಾರ ನೀಡಿದ ಪ್ರೋತ್ಸಾಹವೂ ಕಾರಣವಾಗಿದೆ. ನಮ್ಮ ಸಾಧನೆಯ ಬಗ್ಗೆ ಪೋಷಕರು ಸಂತಸಗೊಂಡಿದ್ದಾರೆ ಎಂದು ಹೆಲಿಕಾಫ್ಟರ್ನಲ್ಲಿ ಪ್ರಯಾಣಿಸಿದ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸಬೇಕೆಂಬುದು ಪ್ರತಿಯೊಬ್ಬರ ಬಯಕೆ. ಆಕಾಶದಲ್ಲಿ ಹಾರಬೇಕೆಂಬ ಮಕ್ಕಳ ಬಯಕೆ ತಮ್ಮ ಸಾಧನೆಯ ಮೂಲಕ ನೆರವೇರಿದೆ. ಈ ಮೂಲಕ ಇನ್ನಷ್ಟು ಸಾಧನೆ ಮಾಡಬೇಕೆಂಬ ಧೃಢ ನಿರ್ಧಾರಕ್ಕೆ ಮಕ್ಕಳು ಬರುತ್ತಾರೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅಭಿಪ್ರಾಯ ಪಟ್ಟಿದ್ದಾರೆ.
Chhattisgarh Chief Minister Bhupesh Baghel on Saturday fulfilled his promise of a 'helicopter ride' to the toppers of class 10 and 12 examinations."Helicopter ride Look how happy the children are! We promised to provide helicopter rides to the toppers of classes 10th and 12th and it has started today. 125 students will enjoy the helicopter joyride," CM Baghel tweeted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm