ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm