ಬ್ರೇಕಿಂಗ್ ನ್ಯೂಸ್
09-10-22 06:00 pm HK News Desk ದೇಶ - ವಿದೇಶ
ಹೈದರಾಬಾದ್, ಅ.9: ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಮಂತ್ರ-ತಂತ್ರಗಳ ಮೇಲೆ ನಂಬಿಕೆ ಜಾಸ್ತಿ. ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರಿದ್ದರೇ ಒಳ್ಳೆಯದಲ್ಲ ಎಂದು ಯಾರೋ ಹೇಳಿದ್ದರಿಂದ 2014 ರಿಂದ 2018ರ ವರೆಗೂ ತೆಲಂಗಾಣ ಕ್ಯಾಬಿನೆಟ್ನಲ್ಲಿ ಮಹಿಳೆಯರನ್ನು ತೆಗೆದುಕೊಂಡಿರಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ಮಾಡಿದ್ದಾರೆ.
ಪ್ರತ್ಯೇಕ ತೆಲಂಗಾಣ ಸ್ಥಾಪನೆಗಾಗಿಯೇ ಪಕ್ಷವನ್ನು ರಚನೆ ಮಾಡಿದ್ದೆವು ಎಂದು ಹೇಳುತ್ತಿದ್ದ ಕೆಸಿಆರ್ ಇಂದು ಪಕ್ಷದ ಹೆಸರನ್ನೇ ಬದಲಿಸಿದ್ದಾರೆ. ಇದರ ಹಿಂದಿರುವ ಆಂತರ್ಯವೇನು ಎಂದು ಕೇಂದ್ರ ಸಚಿವೆ ಪ್ರಶ್ನೆ ಮಾಡಿದ್ದಾರೆ. ನೀರು, ನಿಧಿಗಳು, ನೇಮಕಾತಿಗಳು ಎಂಬ ಘೋಷ ವಾಕ್ಯದಡಿ ಟಿಆರ್ಎಸ್ ಪಕ್ಷ ಸ್ಥಾಪನೆ ಮಾಡಿ, ಅಧಿಕಾರಕ್ಕೆ ಬಂದ ಬಳಿಕ 3 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಿ, ಆ ಭಾರವನ್ನು ಜನರ ಮೇಲೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂತ್ರವಾದಿ ಹೇಳಿದ ಮಾತುಗಳಿಂದ ಪ್ರೇರಿತರಾಗಿ ಸಿಎಂ ಇದುವರೆಗೂ ಸಚಿವಾಲಯಕ್ಕೆ ಹೋಗದೆ, ಕೇವಲ ಫಾರ್ಮ್ ಹೌಸ್, ಪ್ರಗತಿ ಭವನಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಅಲ್ಲದೆ, ಈ ಹಿಂದೆ ಟಿಆರ್ಎಸ್ ಪಾರ್ಟಿ ತೆಲಂಗಾಣ ಜನರಿಗೆ ನೀಡಿರುವ ಭರವಸೆಗಳು ಏನಾಗಬೇಕು..? ತೆಲಂಗಾಣ ಮೇಲಿನ ಸೆಂಟಿಮೆಂಟ್ನಿಂದಲೇ ಜನರು ಟಿಆರ್ಎಸ್ ಪರ ವೋಟ್ ಹಾಕಿದ್ದರು. ಆದರೆ ಈಗ ಪಕ್ಷದಲ್ಲಿ ತೆಲಂಗಾಣ ಹೆಸರೇ ಇಲ್ಲದಂತೆ ಮಾಡಿದ್ದಾರೆ. ಸಿಎಂ ಆಗಿ ಇದ್ದಾಗಲೇ ಕೆಸಿಆರ್ ರಾಜ್ಯದ ಜನರಿಗೆ ಏನೂ ಮಾಡಿಲ್ಲ, ಇನ್ನು ದೇಶದ ಜನರಿಗೆ ಇವರು ಏನು ಮಾಡ್ತಾರೆ..? ತೆಲಂಗಾಣ ಜನರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡದಿರೋರು ದೇಶದ ಜನರಿಗೆ ಏನೋ ಮಾಡ್ತಾರೆ ಅಂತ ಹೇಳಿದ್ರೆ ಯಾರು ನಂಬುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Union finance minister Nirmala Sitharaman alleged that KCR deliberately changed his party's name to Bharat Rashtra Samithi (BRS) "on the advice of Tantriks."
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm