ಉತ್ತರಾಖಂಡದಲ್ಲಿ ಹಿಮಪಾತ ದುರಂತ ; ಬೆಂಗಳೂರಿನ ಇಬ್ಬರು ಮೃತ್ಯು 

09-10-22 10:04 pm       HK News Desk   ದೇಶ - ವಿದೇಶ

ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್ ಮತ್ತು ರಶ್ಮಿತ್ ಮೃತ ಯುವಕರಾಗಿದ್ದು ದುರಂತ ಸ್ಥಳದಲ್ಲಿ ಶವ ಪತ್ತೆಯಾಗಿದೆ. 

ನವದೆಹಲಿ, ಅ.9 : ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ವಿಕ್ರಮ್ ಮತ್ತು ರಶ್ಮಿತ್ ಮೃತ ಯುವಕರಾಗಿದ್ದು ದುರಂತ ಸ್ಥಳದಲ್ಲಿ ಶವ ಪತ್ತೆಯಾಗಿದೆ. 

ಅ.8ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ. ಅ.4ರಂದು ಪರ್ವತಾರೋಹಣ ನಡೆಸುತ್ತಿದ್ದ ಸಂದರ್ಭದಲ್ಲಿ ಹಿಮಪಾತ ಸಂಭವಿಸಿದ್ದು ಮೊದಲಿಗೆ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು ಎನ್ನಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಹಲವು ರಾಜ್ಯಗಳ ಯುವಕರು ದುರಂತಕ್ಕೀಡಾಗಿದ್ದಾರೆ. ಈವರೆಗೆ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. 

ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪರ್ವತಕ್ಕೆ ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಪ್ರತಿಕೂಲ ಹವಾಮಾನದ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.

Uttarakhand heavy snowfall, two from Bangalore killed.