ಬ್ರೇಕಿಂಗ್ ನ್ಯೂಸ್
10-10-20 04:55 pm Headline Karnataka News Network ದೇಶ - ವಿದೇಶ
ಅಮೆರಿಕ, ಅಕ್ಟೋಬರ್ 10: ವಿಶ್ವದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ಹಾರ್ವರ್ಡ್ ಬಿಸಿನೆಸ್ ಸ್ಕೂಲ್ ಡೀನ್ ಆಗಿ ಭಾರತ ಮೂಲದ ಶ್ರೀಕಾಂತ್ ದಾತಾರ್ ಅವರನ್ನು ಹಾರ್ವರ್ಡ್ ವಿವಿ ನೇಮಕ ಮಾಡಿದೆ.
ಪ್ರಸ್ತುತ ಆರ್ಥರ್ ಲೊವೆಸ್ ಡಿಕಿನ್ಸನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪ್ರಾಧ್ಯಾಪಕ ಮತ್ತು ಎಚ್ಬಿಎಸ್ನಲ್ಲಿ ವಿಶ್ವವಿದ್ಯಾಲಯ ವ್ಯವಹಾರಗಳ ಹಿರಿಯ ಸಹಾಯಕ ಡೀನ್ ಆಗಿರುವ ದತಾರ್ ಜನವರಿ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಸ್ತೃತ ಅಂತಾರಾಷ್ಟ್ರೀಯ ದೃಷ್ಟಿಕೋನ, ವ್ಯವಹಾರ ಕ್ಷೇತ್ರದಲ್ಲಿ ದಶಕದ ಕಾಲ ತೊಡಗಿಸಿಕೊಂಡ ಅನುಭವ, ವೈವಿಧ್ಯಮಯ ಹಾಗೂ ಎಲ್ಲರ ಪಾಲ್ಗೊಳ್ಳುವಿಕೆಯ ಎಚ್ಬಿಎಸ್ ಸಮೂಹವನ್ನು ಸೃಷ್ಟಿಸುವಲ್ಲಿ ಬದ್ಧತೆ ಹೊಂದಿದ ಶ್ರೀಕಾಂತ್ ಡೀನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ" ಎಂದು ಹಾರ್ವರ್ಡ್ ವಿವಿ ಅಧ್ಯಕ್ಷ ಲಾರೆನ್ಸ್ ಬಕಾವ್ ತಿಳಿಸಿದ್ದಾರೆ.
ಹಾರ್ವರ್ಡ್ ಬಿಸಿನೆಸ್ ಸ್ಕೂಲ್ನ 112 ವರ್ಷಗಳ ಇತಿಹಾಸದಲ್ಲಿ 11ನೇ ಡೀನ್ ಆಗಿ ದಾತಾರ್ ನೇಮಕವಾಗಿದ್ದು ,ಒಂದರ ಹಿಂದೆ ಮತೊಬ್ಬ ಭಾರತೀಯ ಈ ಹುದ್ದೆಯನ್ನು ಅಲಂಕರಿಸುತ್ತಿರುವುದು ಇದೆ ಮೊದಲು.
ಕಳೆದ ನವೆಂಬರ್ ನಲ್ಲಿ 10 ವರ್ಷಗಳ ವಿಶೇಷ ಸೇವೆಯ ನಂತರ 2020 ರ ಜೂನ್ ಅಂತ್ಯದಲ್ಲಿ ಡೀನ್ ಶಿಪ್ ಮುಕ್ತಾಯಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದ ಭಾರತ ಮೂಲದ ನಿತಿನ್ ನೊಹ್ರಿಯಾ, ಕೋವಿಡ್-19 ಕಾರಣದಿಂದಾಗಿ ಡಿಸೆಂಬರ್ ವರೆಗೂ ಮುಂದುವರೆಯಂತೆ ಒಪ್ಪಿಕೊಂಡಿದ್ದರು.
ಭಾರತ ಮೂಲದ ದಾತಾರ್, ಸ್ಟಾನ್ಫೋರ್ಡ್ ವಿವಿಯ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಬಿಸಿನೆಸ್ನಿಂದ 1996ರಲ್ಲಿ ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಸೇರಿದ್ದರು. ವೆಚ್ಚ ನಿರ್ವಹಣೆ ಮತ್ತು ಕಾರ್ಪೊರೇಟ್ ಆಡಳಿತ ಕ್ಷೇತ್ರದಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ವಿನೂತನ ಸಮಸ್ಯೆ ಬಗೆಹರಿಸುವಿಕೆ ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ನೊರ್ವಾಟೀಸ್ ಎಜಿ ಮತ್ತು ಟಿ-ಮೊಬೈಲ್ ಯುಎಸ್ ಇಂಕ್ ಸೇರಿದಂತೆ ಹಲವು ಕಂಪನಿಗಳ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.
Srikant Datar, Professor of Business Administration and the senior associate Dean for University Affairs at Harvard Business School (HBS), will become the second consecutive dean hailing from India to lead the prestigious 112-year-old institution.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am