ಬ್ರೇಕಿಂಗ್ ನ್ಯೂಸ್
10-10-20 04:55 pm Headline Karnataka News Network ದೇಶ - ವಿದೇಶ
ಅಮೆರಿಕ, ಅಕ್ಟೋಬರ್ 10: ವಿಶ್ವದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲೊಂದಾದ ಹಾರ್ವರ್ಡ್ ಬಿಸಿನೆಸ್ ಸ್ಕೂಲ್ ಡೀನ್ ಆಗಿ ಭಾರತ ಮೂಲದ ಶ್ರೀಕಾಂತ್ ದಾತಾರ್ ಅವರನ್ನು ಹಾರ್ವರ್ಡ್ ವಿವಿ ನೇಮಕ ಮಾಡಿದೆ.
ಪ್ರಸ್ತುತ ಆರ್ಥರ್ ಲೊವೆಸ್ ಡಿಕಿನ್ಸನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪ್ರಾಧ್ಯಾಪಕ ಮತ್ತು ಎಚ್ಬಿಎಸ್ನಲ್ಲಿ ವಿಶ್ವವಿದ್ಯಾಲಯ ವ್ಯವಹಾರಗಳ ಹಿರಿಯ ಸಹಾಯಕ ಡೀನ್ ಆಗಿರುವ ದತಾರ್ ಜನವರಿ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಸ್ತೃತ ಅಂತಾರಾಷ್ಟ್ರೀಯ ದೃಷ್ಟಿಕೋನ, ವ್ಯವಹಾರ ಕ್ಷೇತ್ರದಲ್ಲಿ ದಶಕದ ಕಾಲ ತೊಡಗಿಸಿಕೊಂಡ ಅನುಭವ, ವೈವಿಧ್ಯಮಯ ಹಾಗೂ ಎಲ್ಲರ ಪಾಲ್ಗೊಳ್ಳುವಿಕೆಯ ಎಚ್ಬಿಎಸ್ ಸಮೂಹವನ್ನು ಸೃಷ್ಟಿಸುವಲ್ಲಿ ಬದ್ಧತೆ ಹೊಂದಿದ ಶ್ರೀಕಾಂತ್ ಡೀನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ" ಎಂದು ಹಾರ್ವರ್ಡ್ ವಿವಿ ಅಧ್ಯಕ್ಷ ಲಾರೆನ್ಸ್ ಬಕಾವ್ ತಿಳಿಸಿದ್ದಾರೆ.
ಹಾರ್ವರ್ಡ್ ಬಿಸಿನೆಸ್ ಸ್ಕೂಲ್ನ 112 ವರ್ಷಗಳ ಇತಿಹಾಸದಲ್ಲಿ 11ನೇ ಡೀನ್ ಆಗಿ ದಾತಾರ್ ನೇಮಕವಾಗಿದ್ದು ,ಒಂದರ ಹಿಂದೆ ಮತೊಬ್ಬ ಭಾರತೀಯ ಈ ಹುದ್ದೆಯನ್ನು ಅಲಂಕರಿಸುತ್ತಿರುವುದು ಇದೆ ಮೊದಲು.
ಕಳೆದ ನವೆಂಬರ್ ನಲ್ಲಿ 10 ವರ್ಷಗಳ ವಿಶೇಷ ಸೇವೆಯ ನಂತರ 2020 ರ ಜೂನ್ ಅಂತ್ಯದಲ್ಲಿ ಡೀನ್ ಶಿಪ್ ಮುಕ್ತಾಯಗೊಳಿಸುವ ಯೋಜನೆಯನ್ನು ಪ್ರಕಟಿಸಿದ್ದ ಭಾರತ ಮೂಲದ ನಿತಿನ್ ನೊಹ್ರಿಯಾ, ಕೋವಿಡ್-19 ಕಾರಣದಿಂದಾಗಿ ಡಿಸೆಂಬರ್ ವರೆಗೂ ಮುಂದುವರೆಯಂತೆ ಒಪ್ಪಿಕೊಂಡಿದ್ದರು.
ಭಾರತ ಮೂಲದ ದಾತಾರ್, ಸ್ಟಾನ್ಫೋರ್ಡ್ ವಿವಿಯ ಗ್ರಾಜ್ಯುಯೇಟ್ ಸ್ಕೂಲ್ ಆಫ್ ಬಿಸಿನೆಸ್ನಿಂದ 1996ರಲ್ಲಿ ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್ ಸೇರಿದ್ದರು. ವೆಚ್ಚ ನಿರ್ವಹಣೆ ಮತ್ತು ಕಾರ್ಪೊರೇಟ್ ಆಡಳಿತ ಕ್ಷೇತ್ರದಲ್ಲಿ ಅವರು ಪರಿಣತಿ ಹೊಂದಿದ್ದಾರೆ. ಡಾಟಾ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್, ವಿನೂತನ ಸಮಸ್ಯೆ ಬಗೆಹರಿಸುವಿಕೆ ಮತ್ತು ಮೆಷಿನ್ ಲರ್ನಿಂಗ್ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದಾರೆ. ನೊರ್ವಾಟೀಸ್ ಎಜಿ ಮತ್ತು ಟಿ-ಮೊಬೈಲ್ ಯುಎಸ್ ಇಂಕ್ ಸೇರಿದಂತೆ ಹಲವು ಕಂಪನಿಗಳ ಆಡಳಿತ ಮಂಡಳಿಯ ಸದಸ್ಯರಾಗಿದ್ದಾರೆ.
Srikant Datar, Professor of Business Administration and the senior associate Dean for University Affairs at Harvard Business School (HBS), will become the second consecutive dean hailing from India to lead the prestigious 112-year-old institution.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm