ಬ್ರೇಕಿಂಗ್ ನ್ಯೂಸ್
14-10-22 04:13 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಜ್ಞಾನವಾಪಿ ಮಸೀದಿ ಮತ್ತು ಶೃಂಗಾರ ಗೌರಿಗೆ ಪೂಜೆ ಸಲ್ಲಿಸುವ ಪ್ರಕರಣಕ್ಕೆ ಸಂಬಂಧಿಸಿ ವಾರಣಾಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಬೇಡಿಕೆಯನ್ನು ಕೋರ್ಟ್ ತಿರಸ್ಕರಿಸಿದೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ನಡೆಸಲು ಅವಕಾಶ ನೀಡುವಂತೆ ಕೋರಿ ವಾರಣಾಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಂಬಂಧ ತೀರ್ಪು ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್, ಹಿಂದೂಗಳ ಕಡೆಯ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ಪರೀಕ್ಷೆಯ ವಿಷಯದಲ್ಲಿ ಚರ್ಚೆಗಳು ಪೂರ್ಣಗೊಂಡ ನಂತರ ತೀರ್ಪು ಪ್ರಕಟಿಸಲಾಯಿತು. ಶಿವಲಿಂಗದ ಕಾರ್ಬನ್ ಡೇಟಿಂಗ್ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಧೀಶ ಡಾ ಅಜಯ್ ಕೃಷ್ಣ ವಿಶ್ವೇಶ್ ಅವರ ಪೀಠದಲ್ಲಿ ಅಕ್ಟೋಬರ್ 12ರಂದು ವಿಚಾರಣೆ ನಡೆದಿತ್ತು. ವಿಚಾರಣೆ ನಂತರ, ತೀರ್ಪು ಕಾದಿರಿಸಲಾಗಿತ್ತು.

ಅಂಜುಮನ್ ಮಸೀದಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಕೇವಲ ಶೃಂಗಾರ ಗೌರಿ ಪೂಜೆ ಮತ್ತು ದರ್ಶನಕ್ಕಾಗಿ ಪ್ರಕರಣ ದಾಖಲಿಸಲಾಗಿತ್ತು. ಮೇ 17ರಂದು ಕಂಡುಬಂದ ಆಕೃತಿಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಾರ್ಬನ್ ಡೇಟಿಂಗ್ ಜೀವಿಗಳು ಮತ್ತು ಪ್ರಾಣಿಗಳ ಮೇಲೆ ನಡೆಸಬೇಕು. ಅದು ಕಲ್ಲಿನ ಮೇಲೆ ನಡೆಸುವುದು ಸಾಧ್ಯವಿಲ್ಲ. ಏಕೆಂದರೆ ಕಲ್ಲು ಇಂಗಾಲಕ್ಕೆ ಹೊಂದಿಕೊಳ್ಳುವುದಿಲ್ಲ. ಪ್ರಕರಣವನ್ನು ಬಲಪಡಿಸಲು ಮತ್ತು ಪುರಾವೆಗಳನ್ನು ಸಂಗ್ರಹಿಸಲು ಕಾರ್ಬನ್ ಡೇಟಿಂಗ್ ಮಾಡಲಾಗುತ್ತದೆ. ಹೀಗಾಗಿ ಕಾರ್ಬನ್ ಡೇಟಿಂಗ್ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದಿಸಿದ್ದರು.
A Varanasi district court on Friday (October 14) rejected the demand for carbon dating of a "Shivling", claimed to be found on the Gyanvapi mosque premises. Hindu petitioners demanded the scientific test to establish the age of the alleged 'Shivling' but the court did not find legal merit in their demand.The claim was disputed by the Muslim side, which said the object was part of a "fountain".
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm