ಬ್ರೇಕಿಂಗ್ ನ್ಯೂಸ್
15-10-22 07:56 pm HK News Desk ದೇಶ - ವಿದೇಶ
ಶ್ರೀನಗರ, ಅ.15: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತ ಕುಟುಂಬಕ್ಕೆ ಸೇರಿದ ವ್ಯಕ್ತಿಯನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಕಾಶ್ಮೀರದಲ್ಲಿ ಕೇಂದ್ರ ಸರಕಾರ ಶಾಂತಿ ಮರುಸ್ಥಾಪನೆಗೆ ಶತ ಪ್ರಯತ್ನ ಮಾಡುತ್ತಿರುವಾಗಲೇ ಉಗ್ರರು ಪಂಡಿತರನ್ನೇ ಗುರಿಯಾಗಿಸಿ ಕೊಲ್ಲುತ್ತಿದ್ದಾರೆ.
ಶೋಪಿಯಾನ್ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದಲ್ಲಿ ಪುರಣ್ ಕೃಷ್ಣ ಎಂಬವರನ್ನು ಗುಂಡಿಟ್ಟು ಕೊಲ್ಲಲಾಗಿದೆ. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹೊಂದಿದ್ದರು. ಇದರ ಬೆನ್ನಲ್ಲೇ ಜಮ್ಮು ಕಾಶ್ಮೀರದ ಪಂಡಿತ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ. ನಾವು ಇಲ್ಲಿಂದ ಬೇರೆ ಕಡೆಗೆ ಹೋಗಿ ನೆಲೆಸುತ್ತೇವೆ. ಅದಕ್ಕೆ ಅವಕಾಶ ಕೊಡಿ ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
ಕಾಶ್ಮೀರದಲ್ಲಿ ಆಡಳಿತ ನಡೆಸುತ್ತಿರುವ ಗವರ್ನರ್ ಮನೋಜ್ ಸಿನ್ಹಾ ಪ್ರತಿಕ್ರಿಯಿಸಿ, ಇದು ಹೇಡಿಗಳ ಕಿರತಾಕ ಕೃತ್ಯ, ಉಗ್ರರನ್ನು ಹಾಗೇ ಬಿಡುವುದಿಲ್ಲ. ಸದೆಬಡಿಯುತ್ತೇವೆ ಎಂದು ಹೇಳಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ ನಾಯಕರು ಕೂಡ ಕಾಶ್ಮೀರಿ ಪಂಡಿತರನ್ನು ಕೊಂದಿರುವುದನ್ನು ಖಂಡಿಸಿದ್ದಾರೆ. ಕಳೆದ ಮೇ ತಿಂಗಳ ಬಳಿಕ ಜಮ್ಮು ಕಾಶ್ಮೀರದಲ್ಲಿ ಪಂಡಿತರನ್ನು ಗುರಿಯಾಗಿಟ್ಟು ಕೊಲ್ಲುವುದು ಹೆಚ್ಚಿತ್ತು. ಸರಣಿಯಾಗಿ 20ಕ್ಕೂ ಹೆಚ್ಚು ಮಂದಿಯನ್ನು ಗುಂಡಿಟ್ಟು ಕೊಲ್ಲಲಾಗಿದೆ. ಪ್ರತಿಯಾಗಿ ಅಷ್ಟೇ ಉಗ್ರರನ್ನು ಸೇನಾಪಡೆ ಹೊಡೆದು ಹಾಕಿದೆ. ಕೊನೆಯ ಬಾರಿಗೆ ಆಗಸ್ಟ್ 16ರಂದು ಕಾಶ್ಮೀರಿ ಪಂಡಿತ ಸೋದರರ ಮೇಲೆ ಗುಂಡು ಹಾರಿಸಿದ್ದರು. ಅದರಲ್ಲಿ ಸುನಿಲ್ ಕುಮಾರ್ ಸಾವನ್ನಪ್ಪಿದ್ದರೆ, ಸೋದರ ಪೀತಾಂಬರ್ ಬದುಕುಳಿದಿದ್ದರು.
A Kashmiri Pandit, Puran Krishan Bhat, was shot dead by militants in the Shopian district of Jammu and Kashmir on Saturday. Deputy Inspector General of Police Sujit Kumar said the Kashmir Freedom Fighter (KFF) group, the proxy name of a militant outfit, has claimed responsibility for the attack.Bhat was attacked near his residence in the Chowdhary Gund area of the south Kashmir district, officials said, adding that he was rushed to Shopian hospital where doctors declared him dead. The area has been cordoned off and a hunt has been launched to nab the assailants.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm