ಬ್ರೇಕಿಂಗ್ ನ್ಯೂಸ್
19-10-22 02:39 pm HK News Desk ದೇಶ - ವಿದೇಶ
ನವದೆಹಲಿ, ಅ.19 : ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಗಂಭೀರ ಅಕ್ರಮ ನಡೆದಿದೆ ಎಂಬ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಅಧ್ಯಕ್ಷ ಅಭ್ಯರ್ಥಿ ಶಶಿ ತರೂರ್ ಪರ ಏಜಂಟರು, ಕೇಂದ್ರೀಯ ಚುನಾವಣಾ ಸಮಿತಿಗೆ ಬರೆದಿರುವ ದೂರು ಪತ್ರ ಮಾಧ್ಯಮಕ್ಕೆ ಲೀಕ್ ಆಗಿದೆ.
ಈ ಬಗ್ಗೆ ಶಶಿ ತರೂರ್ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದು ಇದು ಪಕ್ಷದ ಒಳಗಿನ ವಿಷಯ. ದೂರು ಕೊಟ್ಟಿರುವುದು ಮಾಧ್ಯಮಕ್ಕೆ ಲೀಕ್ ಆಗಿದ್ದು ಹೇಗೆಂದು ತನಿಖೆ ನಡೆಯಬೇಕು. ಆದರೆ ಈ ಚುನಾವಣೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿದೆ. ಮತ್ತಷ್ಟು ಒಗ್ಗಟ್ಟು ಮಾಡಿಸಿದೆ ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ತರೂರ್ ಪರ ಚುನಾವಣಾ ಪ್ರಚಾರ ಮ್ಯಾನೇಜರ್ ಆಗಿದ್ದ ಸಲ್ಮಾನ್ ಸೋಜ್, ಅಲ್ಲಿನ ಮತಗಟ್ಟೆಯಲ್ಲಿ ಅಕ್ರಮ ಆಗಿರುವ ಬಗ್ಗೆ ನಮ್ಮ ತಂಡವು ಕೇಂದ್ರಕ್ಕೆ ದೂರು ಪತ್ರ ಬರೆದಿತ್ತು. ಈ ಬಗ್ಗೆ ತನಿಖೆ ನಡೆಸುವುದಾಗಿ ಕೇಂದ್ರ ತಂಡ ಹೇಳಿದೆ. ನಾವು ಫಲಿತಾಂಶ ಎದುರು ನೋಡುತ್ತಿದ್ದೇವೆ ಎಂದರು.
ಉತ್ತರ ಪ್ರದೇಶದ ಲಕ್ನೋದಲ್ಲಿ ತರೂರ್ ಪರ ಪ್ರತಿನಿಧಿಗಳು ಇರಲಿಲ್ಲ. ಅಲ್ಲಿ ಚುನಾವಣಾ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಕೆಲವರು ಮತಗಟ್ಟೆಗೆ ಬಂದಾಗ, ಮತ ಹಾಕಲು ಬಿಡಲಿಲ್ಲ. ಅದಕ್ಕೂ ಮೊದಲೇ ಒಂದಷ್ಟು ಮಂದಿ ಮತ ಹಾಕಿದ್ದರು. ನಮ್ಮ ಏಜಂಟರು ಅಲ್ಲಿಗೆ ತೆರಳಿದಾಗ, ಒಳಗೆ ಹೋಗಲು ಬಿಡಲಿಲ್ಲ. ನಮ್ಮ ಏಜಂಟರನ್ನು ಅಲ್ಲಿದ್ದವರು ಬೆದರಿಸಿದ್ದಾರೆ ಎಂದು ದೂರು ಪತ್ರದಲ್ಲಿ ಹೇಳಿದ್ದಾರೆ.
ಮಧ್ಯಾಹ್ನ ಮೂರು ಗಂಟೆ ವೇಳೆಗೆ ಫಲಿತಾಂಶ ಬರಲಿದ್ದು ಬಹುತೇಕ ಮಲ್ಲಿಕಾರ್ಜುನ ಖರ್ಗೆ ಗೆಲ್ಲಲಿದ್ದಾರೆ. ತರೂರ್ ಪರವಾಗಿ ಕೆಲವು ರಾಜ್ಯಗಳಲ್ಲಿ ಪ್ರಚಾರ ನಡೆದಿದ್ದರೂ ಹೆಚ್ಚಿನ ಕಡೆ ಕಾಂಗ್ರೆಸ್ ಹೈಕಮಾಂಡ್ ಪರ ಖರ್ಗೆ ಅಭ್ಯರ್ಥಿ ಎನ್ನುವ ರೀತಿ ಬಿಂಬಿಸಲಾಗಿತ್ತು. ಹೀಗಾಗಿ ಖರ್ಗೆಯೇ ಗೆಲ್ಲುವುದು ಖಚಿತ ಎನ್ನಲಾಗುತ್ತಿದೆ.
As the counting for Congress’ top post at AICC headquarters in New Delhi is underway, the Shashi Tharoor-led camp has alleged irregularities in UttarPradesh. On October 19, Congress leader Salman Soz, on behalf of Lok Sabha MP, Shashi Tharoor, wrote a letter to Central Election Authority chairman Madhusudan Mistry alleging “extremely serious irregularities” in the conduct of the election process in Uttar Pradesh.
14-05-24 05:49 pm
Bangalore Correspondent
ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು ; ಜನಪ್ರತ...
13-05-24 09:17 pm
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
14-05-24 07:21 pm
HK News Desk
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ಮತದಾರನಿಗೆ ಶಾಸಕ ಕ...
14-05-24 02:17 pm
Mumbai hoarding collapse, Rain: ಮುಂಬೈನಲ್ಲಿ ಮಳ...
14-05-24 11:47 am
14-05-24 10:08 pm
Mangalore Correspondent
Mangalore news, Ullal, Rajeev Shetty: ಸೋಮೇಶ್ವ...
14-05-24 09:13 pm
Harish acharya, Parishad Elections: ನೈರುತ್ಯ ಶ...
13-05-24 10:15 pm
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
14-05-24 10:45 pm
Bangalore Correspondent
Online fraud, Job offer, Mangalore: ಆನ್ಲೈನಲ್ಲ...
13-05-24 07:15 pm
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm