ಬ್ರೇಕಿಂಗ್ ನ್ಯೂಸ್
20-10-22 06:45 pm HK News Desk ದೇಶ - ವಿದೇಶ
ಲಂಡನ್, ಅ.20: ಆಂಗ್ಲರ ನಾಡಿನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿ ಹುದ್ದೆಗೇರಿದ್ದ ಲಿಜ್ ಟ್ರಸ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದ್ದಾರೆ.
ಲಿಜ್ ಟ್ರಸ್ ಸಂಪುಟದಲ್ಲಿದ್ದ ಇಬ್ಬರು ಸಚಿವರು ಬೆನ್ನು ಬೆನ್ನಿಗೆ ರಾಜಿನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಲಿಜ್ ಟ್ರಸ್ ಪ್ರಧಾನಿ ಹುದ್ದೆ ತೊರೆಯಲಿದ್ದಾರೆ ಎನ್ನುವ ವದಂತಿ ಹರಡಿತ್ತು. ಇದೀಗ ಸ್ವತಃ ಟ್ರಸ್ ಅವರೇ ತಮ್ಮ ಸ್ಥಾನ ತೊರೆಯುವುದಾಗಿ ಪ್ರಕಟಿಸಿದ್ದಾರೆ.
ನಾನು ಪ್ರಧಾನಿ ಹುದ್ದೆಗೇರಿದರೂ, ಈ ಸ್ಥಾನಕ್ಕೆ ನ್ಯಾಯ ದೊರಕಿಸಲು ಆಗುತ್ತಿಲ್ಲ. ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷರು ಮತ್ತು ಕಿಂಗ್ ಚಾರ್ಲ್ಸ್ ಜೊತೆಗೆ ಮಾತನಾಡಿದ್ದೇನೆ. ಮುಂದಿನ ಪ್ರಧಾನಿ ಆಗುವ ವರೆಗೆ ಈ ಸ್ಥಾನದಲ್ಲಿ ಹಂಗಾಮಿ ಇರುತ್ತೇನೆ. ಆದಷ್ಟು ಬೇಗ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅದಕ್ಕಾಗಿ ಮಿನಿ ಬಜೆಟ್ ಮಾಡುವುದಕ್ಕೆ ಲಿಜ್ ಟ್ರಸ್ ಮುಂದಾಗಿದ್ದರು. ಆದರೆ ಈ ಪ್ರಸ್ತಾಪಕ್ಕೆ ಸಂಪುಟದಲ್ಲಿ ಸಹಮತ ಸಿಕ್ಕಿರಲಿಲ್ಲ. ಇದೇ ಗೊಂದಲದಲ್ಲಿ ಕೆಲವು ಸಚಿವರು ರಾಜಿನಾಮೆ ಕೊಟ್ಟಿದ್ದರು. ಇದೀಗ ಸ್ವತಃ ಪ್ರಧಾನಿಯೇ ರಾಜಿನಾಮೆ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಭಾರತ ಮೂಲದ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟು ಟ್ರಸ್ ಪ್ರಧಾನಿ ಸ್ಥಾನಕ್ಕೇರಿದ್ದರು. ಆರು ವಾರಗಳ ವರೆಗೆ ಪ್ರಧಾನಿ ಕಚೇರಿಯಲ್ಲಿದ್ದ ಲಿಜ್ ಈಗ ಹೊರ ನಡೆದಿದ್ದಾರೆ.
British Prime Minister Liz Truss has described herself as “a fighter and not a quitter” as she faces down a hostile opposition and fury from her own Conservative Party over her botched economic plan.Truss on Wednesday attended her first session of Prime Minister’s Questions since newly appointed chancellor Jeremy Hunt ripped up the tax-cutting package unveiled by her new government less than a month ago.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm