ಬ್ರೇಕಿಂಗ್ ನ್ಯೂಸ್
27-10-22 01:55 pm HK News Desk ದೇಶ - ವಿದೇಶ
ಕೊಚ್ಚಿ,ಅ.27 : ತನ್ನ ಮಕ್ಕಳ ಕೈಯಲ್ಲಿ ಅರೆಬೆತ್ತಲೆ ದೇಹದ ಮೇಲೆ ಡ್ರಾಯಿಂಗ್ ಮಾಡಿಸಿಕೊಳ್ಳುವ ಮೂಲಕ ಭಾರಿ ವಿವಾದಕ್ಕೀಡಾಗಿದ್ದ ಹಾಗೂ ಆಗಾಗ ಹಿಂದುಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತಹ ಭಾವನೆಗಳನ್ನು, ನಡವಳಿಕೆಗಳನ್ನು ಪ್ರದರ್ಶಿಸುವ ಹೋರಾಟಗಾರ್ತಿ ರೆಹನಾ ಫಾತಿಮಾ ವಿರುದ್ಧ ಅವರ ತಾಯಿಯೇ ಇದೀಗ ದೂರು ದಾಖಲಿಸಿದ್ದಾರೆ.
ರೆಹನಾ ತಾಯಿ ಪ್ಯಾರಿ ಅವರು ಆಲಪ್ಪುಳ ನಾರ್ಥ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ.

ಮಗಳು ರೆಹನಾ ಮತ್ತು ಅಳಿಯನ ಜೊತೆ ಎರ್ನಾಕುಲಂನ ಫ್ಲ್ಯಾಟ್ನಲ್ಲಿ ಇರುವಾಗ ನನಗೆ ತುಂಬಾ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ನಾನು ಆಲಪ್ಪುಳದಲ್ಲಿರುವ ನನ್ನ ಸಂಬಂಧಿಕರ ಮನೆಗೆ ಸ್ಥಳಾಂತರವಾಗಿದ್ದೇನೆ. ಕಳೆದ ಎರಡು ತಿಂಗಳಿಂದ ಸಂಬಂಧಿಕರ ಮನೆಯಲ್ಲೇ ಉಳಿದಿದ್ದೇನೆ. ಆದರೆ, ರೆಹನಾ ಅಲ್ಲಿಗೂ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ದೂರಿನಲ್ಲಿ ಪ್ಯಾರಿ ಅವರು ಉಲ್ಲೇಖಿಸಿದ್ದಾರೆ.
ಮಗಳ ಜೊತೆ ಬಾಳಲು ಆಸಕ್ತಿ ಇಲ್ಲ ಎಂದಿರುವ ಪ್ಯಾರಿ, ರೆಹಾನಾಗೆ ತನ್ನ ಸಂಬಂಧಿಕರಿಗೆ ತೊಂದರೆ ಮಾಡದಂತೆ ಎಚ್ಚರಿಕೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಅಲಪ್ಪುಳ ನಾರ್ಥ್ ಪೊಲೀಸರು ರೆಹನಾ ಫಾತಿಮಾ ಅವರನ್ನು ಠಾಣೆಗೆ ಕರೆಸಿ, ಯಾವುದೇ ರೀತಿಯಲ್ಲಿ ತಾಯಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.
ಅರೆಬೆತ್ತಲೆ ದೇಹದ ಮೇಲೆ ಚಿತ್ರ:
2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ದೂರು ದಾಖಲಾಗಿತ್ತು. ಅಲ್ಲದೆ, ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಆಯೋಗವು ಸಹ ಮಧ್ಯಪ್ರವೇಶಿಸಿತ್ತು. ಇದರ ನಡುವೆ ರಾಜ್ಯ ಸರ್ಕಾರ ರೆಹಾನಾ ಜಾಮೀನು ನೀಡದಂತೆ ಅರ್ಜಿಯನ್ನು ಸಲ್ಲಿಸಿತ್ತು.
A fresh complaint has been filed against activist Rehana Fathima here on Wednesday. Her mother Pyari lodged a complaint with Alappuzha North police accusing her of mental and physical harassment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm