ಬ್ರೇಕಿಂಗ್ ನ್ಯೂಸ್
27-10-22 01:55 pm HK News Desk ದೇಶ - ವಿದೇಶ
ಕೊಚ್ಚಿ,ಅ.27 : ತನ್ನ ಮಕ್ಕಳ ಕೈಯಲ್ಲಿ ಅರೆಬೆತ್ತಲೆ ದೇಹದ ಮೇಲೆ ಡ್ರಾಯಿಂಗ್ ಮಾಡಿಸಿಕೊಳ್ಳುವ ಮೂಲಕ ಭಾರಿ ವಿವಾದಕ್ಕೀಡಾಗಿದ್ದ ಹಾಗೂ ಆಗಾಗ ಹಿಂದುಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತಹ ಭಾವನೆಗಳನ್ನು, ನಡವಳಿಕೆಗಳನ್ನು ಪ್ರದರ್ಶಿಸುವ ಹೋರಾಟಗಾರ್ತಿ ರೆಹನಾ ಫಾತಿಮಾ ವಿರುದ್ಧ ಅವರ ತಾಯಿಯೇ ಇದೀಗ ದೂರು ದಾಖಲಿಸಿದ್ದಾರೆ.
ರೆಹನಾ ತಾಯಿ ಪ್ಯಾರಿ ಅವರು ಆಲಪ್ಪುಳ ನಾರ್ಥ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ.
ಮಗಳು ರೆಹನಾ ಮತ್ತು ಅಳಿಯನ ಜೊತೆ ಎರ್ನಾಕುಲಂನ ಫ್ಲ್ಯಾಟ್ನಲ್ಲಿ ಇರುವಾಗ ನನಗೆ ತುಂಬಾ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ನಾನು ಆಲಪ್ಪುಳದಲ್ಲಿರುವ ನನ್ನ ಸಂಬಂಧಿಕರ ಮನೆಗೆ ಸ್ಥಳಾಂತರವಾಗಿದ್ದೇನೆ. ಕಳೆದ ಎರಡು ತಿಂಗಳಿಂದ ಸಂಬಂಧಿಕರ ಮನೆಯಲ್ಲೇ ಉಳಿದಿದ್ದೇನೆ. ಆದರೆ, ರೆಹನಾ ಅಲ್ಲಿಗೂ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ದೂರಿನಲ್ಲಿ ಪ್ಯಾರಿ ಅವರು ಉಲ್ಲೇಖಿಸಿದ್ದಾರೆ.
ಮಗಳ ಜೊತೆ ಬಾಳಲು ಆಸಕ್ತಿ ಇಲ್ಲ ಎಂದಿರುವ ಪ್ಯಾರಿ, ರೆಹಾನಾಗೆ ತನ್ನ ಸಂಬಂಧಿಕರಿಗೆ ತೊಂದರೆ ಮಾಡದಂತೆ ಎಚ್ಚರಿಕೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಅಲಪ್ಪುಳ ನಾರ್ಥ್ ಪೊಲೀಸರು ರೆಹನಾ ಫಾತಿಮಾ ಅವರನ್ನು ಠಾಣೆಗೆ ಕರೆಸಿ, ಯಾವುದೇ ರೀತಿಯಲ್ಲಿ ತಾಯಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.
ಅರೆಬೆತ್ತಲೆ ದೇಹದ ಮೇಲೆ ಚಿತ್ರ:
2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ದೂರು ದಾಖಲಾಗಿತ್ತು. ಅಲ್ಲದೆ, ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಆಯೋಗವು ಸಹ ಮಧ್ಯಪ್ರವೇಶಿಸಿತ್ತು. ಇದರ ನಡುವೆ ರಾಜ್ಯ ಸರ್ಕಾರ ರೆಹಾನಾ ಜಾಮೀನು ನೀಡದಂತೆ ಅರ್ಜಿಯನ್ನು ಸಲ್ಲಿಸಿತ್ತು.
A fresh complaint has been filed against activist Rehana Fathima here on Wednesday. Her mother Pyari lodged a complaint with Alappuzha North police accusing her of mental and physical harassment.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm