ಬ್ರೇಕಿಂಗ್ ನ್ಯೂಸ್
29-10-22 01:11 pm HK News Desk ದೇಶ - ವಿದೇಶ
ನವದೆಹಲಿ, ಅ.29: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿಮಾನದ ಪೈಲಟ್ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಬೆಂಕಿ ಹತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಶುಕ್ರವಾರ ರಾತ್ರಿ 9.45 ರ ಸುಮಾರಿಗೆ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ 6E-2131 ವಿಮಾನ ಟೇಕಾಫ್ ಆಗಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್ ಟೇಕಾಫ್ ಆಗ್ತಿದ್ದ ವಿಮಾನವನ್ನ ಮತ್ತೆ ತಕ್ಷಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಅಲ್ಲದೆ, ವಿಮಾನ ನಿಲ್ದಾಣದ ಸಿಬ್ಬಂದಿಗೆ ಬೆಂಕಿ ಕಾಣಿಸಿದ್ದ ಕುರಿತು ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನ ನಂದಿಸಿದ್ದಾರೆ. ಘಟನೆ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳ ಹಾರಾಟವನ್ನೂ ಸಹ ರದ್ದು ಮಾಡಲಾಗಿತ್ತು.
ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಒಟ್ಟು 184 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನ್ ಟೇಕಾಫ್ ಆಗುವಾಗ ಕೆಲವು ಪ್ರಯಾಣಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಕಂಡುಬಂದಿದ್ದು ಎಲ್ಲರೂ ಒಂದು ಕ್ಷಣ ಗಾಬರಿಯಾಗಿದ್ದಾರೆ. ವಿಮಾನದ ಎಂಜಿನ್ ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಯಾಣಿಕರು ಸೆರೆ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video: IndiGo Plane's Engine Catches Fire Moments Before Take-Off In Delhi https://t.co/Q3XPWKhpLL pic.twitter.com/MCderoDhLA
— NDTV (@ndtv) October 28, 2022
An IndiGo aircraft was grounded at Delhi’s Indira Gandhi International Airport after sparks were noticed on the runway as the plane’s engine reportedly caught fire. The incident has prompted a probe by the Directorate General of Civil Aviation (DGCA) with the aviation regulator saying that suitable follow-up action would be taken.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm