ಬ್ರೇಕಿಂಗ್ ನ್ಯೂಸ್
29-10-22 07:37 pm HK News Desk ದೇಶ - ವಿದೇಶ
ಮುಂಬೈ, ಅ.29 : ಗುಜರಾತಿನ ಗಾಂಧಿ ನಗರದಿಂದ ಮುಂಬೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶನಿವಾರ ಮತ್ತೆ ಅಪಘಾತಕ್ಕೀಡಾಗಿದೆ. ಎಕ್ಸ್ಪ್ರೆಸ್ ರೈಲು ಗುಜರಾತಿನ ಅತುಲ್ ಎಂಬಲ್ಲಿ ಗೂಳಿಯೊಂದಕ್ಕೆ ಡಿಕ್ಕಿಯಾಗಿದ್ದು ಒಂದೇ ತಿಂಗಳಲ್ಲಿ ಮೂರನೇ ಬಾರಿ ಅಪಘಾತಕ್ಕೀಡಾಗಿದೆ.
ಗೂಳಿಗೆ ಡಿಕ್ಕಿಯಾಗಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದ್ದು 15 ನಿಮಿಷ ತಡವಾಗಿ ಮುಂಬೈ ಸೆಂಟ್ರಲ್ ನಿಲ್ದಾಣವನ್ನು ತಲುಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ. ಗೂಳಿ ಸತ್ತಿದೆ ಎಂದು ಪಶ್ಚಿಮ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಒಂದೇ ತಿಂಗಳಲ್ಲಿ ಮೂರು ಬಾರಿ ಅಪಘಾತಕ್ಕೀಡಾಗಿರುವುದು ವಿಶೇಷ. ಮೂರು ಬಾರಿಯೂ ಜಾನುವಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅ.6ರಂದು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು. ಇದೇ ರೈಲು ಅ.7ರಂದು ಹಸುವಿಗೆ ಗುದ್ದಿತ್ತು. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿತ್ತು. ಆನಂತರ ರೈಲಿನ ಮುಂಭಾಗವನ್ನು ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ಕೆಲ ದಿನಗಳ ಬಳಿಕ ಈ ಅತ್ಯಾಧುನಿಕ ರೈಲಿಗೆ ಮತ್ತೊಮ್ಮೆ ಅಪಘಾತವಾಗಿದೆ.
'ವಂದೇ ಭಾರತ್' ಸರಣಿ ಅಡಿಯಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ, ತಯಾರಿಸಲಾದ ಸೆಮಿ- ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30ರಂದು ಚಾಲನೆ ನೀಡಿದ್ದರು. ಮೊದಲ ಬಾರಿಗೆ ಗುಜರಾತಿನ ಗಾಂಧಿ ನಗರದಿಂದ ಮುಂಬೈ ನಡುವೆ ಪ್ರಯಾಣ ಆರಂಭಿಸಿದೆ.
The Mumbai-Gandhinagar Vande Bharat Superfast Express train rammed into cattle near Atul station in Gujarat on Saturday (October 29) morning, causing a delay of 15-20 minutes in reaching its destination, a railway official said.Railway sources said the incident left the train's front panel damaged and also dented the underbelly equipment of its first coach.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm