ಬ್ರೇಕಿಂಗ್ ನ್ಯೂಸ್
29-10-22 07:37 pm HK News Desk ದೇಶ - ವಿದೇಶ
ಮುಂಬೈ, ಅ.29 : ಗುಜರಾತಿನ ಗಾಂಧಿ ನಗರದಿಂದ ಮುಂಬೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶನಿವಾರ ಮತ್ತೆ ಅಪಘಾತಕ್ಕೀಡಾಗಿದೆ. ಎಕ್ಸ್ಪ್ರೆಸ್ ರೈಲು ಗುಜರಾತಿನ ಅತುಲ್ ಎಂಬಲ್ಲಿ ಗೂಳಿಯೊಂದಕ್ಕೆ ಡಿಕ್ಕಿಯಾಗಿದ್ದು ಒಂದೇ ತಿಂಗಳಲ್ಲಿ ಮೂರನೇ ಬಾರಿ ಅಪಘಾತಕ್ಕೀಡಾಗಿದೆ.
ಗೂಳಿಗೆ ಡಿಕ್ಕಿಯಾಗಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದ್ದು 15 ನಿಮಿಷ ತಡವಾಗಿ ಮುಂಬೈ ಸೆಂಟ್ರಲ್ ನಿಲ್ದಾಣವನ್ನು ತಲುಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ. ಗೂಳಿ ಸತ್ತಿದೆ ಎಂದು ಪಶ್ಚಿಮ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಒಂದೇ ತಿಂಗಳಲ್ಲಿ ಮೂರು ಬಾರಿ ಅಪಘಾತಕ್ಕೀಡಾಗಿರುವುದು ವಿಶೇಷ. ಮೂರು ಬಾರಿಯೂ ಜಾನುವಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅ.6ರಂದು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು. ಇದೇ ರೈಲು ಅ.7ರಂದು ಹಸುವಿಗೆ ಗುದ್ದಿತ್ತು. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿತ್ತು. ಆನಂತರ ರೈಲಿನ ಮುಂಭಾಗವನ್ನು ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ಕೆಲ ದಿನಗಳ ಬಳಿಕ ಈ ಅತ್ಯಾಧುನಿಕ ರೈಲಿಗೆ ಮತ್ತೊಮ್ಮೆ ಅಪಘಾತವಾಗಿದೆ.
'ವಂದೇ ಭಾರತ್' ಸರಣಿ ಅಡಿಯಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ, ತಯಾರಿಸಲಾದ ಸೆಮಿ- ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30ರಂದು ಚಾಲನೆ ನೀಡಿದ್ದರು. ಮೊದಲ ಬಾರಿಗೆ ಗುಜರಾತಿನ ಗಾಂಧಿ ನಗರದಿಂದ ಮುಂಬೈ ನಡುವೆ ಪ್ರಯಾಣ ಆರಂಭಿಸಿದೆ.
The Mumbai-Gandhinagar Vande Bharat Superfast Express train rammed into cattle near Atul station in Gujarat on Saturday (October 29) morning, causing a delay of 15-20 minutes in reaching its destination, a railway official said.Railway sources said the incident left the train's front panel damaged and also dented the underbelly equipment of its first coach.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm