ಬ್ರೇಕಿಂಗ್ ನ್ಯೂಸ್
29-10-22 09:27 pm HK News Desk ದೇಶ - ವಿದೇಶ
ಹೈದರಾಬಾದ್, ಅ.29: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ಎಸ್ ಪಕ್ಷದ ನಾಲ್ವರು ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ಬಿಜೆಪಿ ಆಪರೇಷನ್ ಮಾಡಲು ಮುಂದಾಗಿದ್ದು ಎರಡು ದಿನಗಳ ಹಿಂದೆ ಬಯಲಾಗಿತ್ತು. ಶಾಸಕರನ್ನು ಖರೀದಿಸಲು ಬಂದಿದ್ದರು ಎನ್ನಲಾದ ಮೂವರನ್ನು 15 ಕೋಟಿ ರೂ. ಹಣದ ಜೊತೆ ಪೊಲೀಸರು ಬಂಧಿಸಿದ್ದರು. ಇದರ ನಡುವೆಯೇ ಪ್ರಕರಣಕ್ಕೆ ಮಹತ್ವದ ತಿರುವು ಲಭಿಸಿದ್ದು ಸ್ವಾಮೀಜಿ ಮತ್ತು ಟಿಆರ್ ಎಸ್ ಶಾಸಕರೊಬ್ಬರ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ಬಿಜೆಪಿ ಪರವಾಗಿ ಡೀಲಿಂಗ್ ಮಾಡಲು ಮುಂದಾಗಿದ್ದ ಸ್ವಾಮೀಜಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರು ಪ್ರಸ್ತಾಪಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಶಾಸಕ ರೋಹಿತ್ ರೆಡ್ಡಿ ಹಾಗೂ ರಾಮಚಂದ್ರ ಭಾರತಿ ಸ್ವಾಮೀಜಿ ಎಂಬವರ ನಡುವಿನ ಸಂಭಾಷಣೆ ಆಡಿಯೋ ಇದಾಗಿದ್ದು, ಬಿ.ಎಲ್ ಸಂತೋಷ್ ಪರವಾಗಿ ಮಾತನಾಡುತ್ತಿದ್ದೇನೆ ಎಂದು ಸ್ವಾಮೀಜಿ ಹೇಳಿಕೊಂಡಿದ್ದಾರೆ. ನೀವು ಬಿಜೆಪಿ ಸೇರಿ. ನಮ್ಮ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಎಲ್ಲವನ್ನು ನೋಡಿಕೊಳ್ಳುತ್ತಾರೆ ಎಂದು ಟಿಆರ್ ಎಸ್ ಶಾಸಕನಿಗೆ ಆಮಿಷ ಒಡ್ಡಿದ್ದಾರೆ.


ಸಂತೋಷ್ ಅವರು ಇಡಿ ಮತ್ತು ಸಿಬಿಐ ದಾಳಿ ಆಗದಂತೆ ನೋಡಿಕೊಳ್ಳುತ್ತಾರೆ. ಇನ್ನಿಬ್ಬರು ಶಾಸಕರು ಬಿಜೆಪಿ ಸೇರಲಿದ್ದಾರೆ. ನವೆಂಬರ್ 2ರಂದು ಹೈದ್ರಾಬಾದ್ ಗೆ ಬರುತ್ತೇನೆ. ಅವರ ಹೆಸರನ್ನು ಅಂದು ಬಹಿರಂಗಪಡಿಸುತ್ತೇನೆ. ಗ್ರಹಣದ ನಂತರ ಭೇಟಿಯಾಗೋಣ ಎಂದು ಸ್ವಾಮೀಜಿ ಸಂಭಾಷಣೆ ವೇಳೆ ಶಾಸಕ ರೋಹಿತ್ ರೆಡ್ಡಿಗೆ ಹೇಳಿದ್ದು, ಇದೀಗ ಅದರ ಆಡಿಯೋ ಲೀಕ್ ಆಗಿದೆ. ಇಡಿ, ಸಿಬಿಐ ದಾಳಿ ಆಗದಂತೆ ನೋಡಿಕೊಳ್ತೀವಿ ಎನ್ನುತ್ತಿರುವುದು ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಪಾಲಿಗೆ ಭಾರೀ ಮುಜುಗರ ತಂದಿಟ್ಟಿದೆ.

ಅಕ್ಟೋಬರ್ 26ರಂದು ತೆಲಂಗಾಣದ ಸೈಬರಾಬಾದ್ ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದರು. ಅಲ್ಲದೇ ಮೂವರನ್ನು ಬಂಧಿಸಿ, ಆಪರೇಷನ್ ಕಮಲಕ್ಕೆ ಹಣ ತರಲಾಗಿತ್ತು ಎನ್ನುವ ಅಂಶ ಬಯಲಿಗೆ ತಂದಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಟಿಆರ್ಎಸ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಟಿಆರ್ಎಸ್ನ ನಾಲ್ವರು ಶಾಸಕರಿಗೆ ಪಕ್ಷಾಂತರ ಮಾಡಲು ಬಿಜೆಪಿ 100 ಕೋಟಿ ರೂ. ಆಫರ್ ಕೊಟ್ಟಿತ್ತು ಎಂದು ಆರೋಪಿಸಿತ್ತು.
The alleged case of poaching of TRS MLAs by people claiming to be working on behalf of the Bharatiya Janata Party (BJP) raised the political heat, when two audio clips having a conversation between a godman and Tandur MLA P. Rohit Reddy revolving around TRS MLAs defecting to BJP went viral on social media.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm