ಬ್ರೇಕಿಂಗ್ ನ್ಯೂಸ್
31-10-22 05:38 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಅ.31 : ಕೇರಳದ ಕೋಝಿಕೋಡ್ ಜಿಲ್ಲೆಯ ನೈನಂವಳಪ್ಪು ಎಂಬಲ್ಲಿ ಸಮುದ್ರ ತೀರದಲ್ಲಿ ಹಠಾತ್ತಾಗಿ 50 ಮೀಟರ್ ಉದ್ದಕ್ಕೆ ಸಮುದ್ರ ಹಿಂದೆ ಸರಿದು ನಿಂತಿದ್ದಲ್ಲದೆ, ಸರೋವರದ ರೀತಿ ಅಲೆಗಳಿಲ್ಲದೆ ನಿಶ್ಚಲವಾಗಿ ನಿಂತ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಶನಿವಾರ ಸಂಜೆ ಈ ರೀತಿಯ ವಿದ್ಯಮಾನ ನಡೆದಿದ್ದು ವಿಷಯ ತಿಳಿಯುತ್ತಲೇ ಜನರು ವಿಸ್ಮಯ ನೋಡಲು ಬಂದಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ, ಇದೊಂದು ಪ್ರಕೃತಿ ಸಹಜ ಪ್ರಕ್ರಿಯೆಯಾಗಿದೆ ಎಂದು ಪ್ರತಿಕ್ರಿಯಿಸಿದ್ದು ಯಾವುದೇ ರೀತಿಯ ಸುನಾಮಿ ಸಾಧ್ಯತೆಗಳನ್ನು ಅಲ್ಲಗಳೆದಿದೆ.

ಭಾರತೀಯ ಭೂಗರ್ಭಶಾಸ್ತ್ರ ಇಲಾಖೆಯಾಗಲಿ ಇತರೇ ಯಾವುದೇ ತಜ್ಞರು ಭೂಕಂಪ ಅಥವಾ ಸುನಾಮಿ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಿಲ್ಲ. ಹೀಗಾಗಿ ಸಮುದ್ರ ತೀರದ ಪ್ರದೇಶದಲ್ಲಿರುವ ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಸಂಜೆ 4 ಗಂಟೆ ಸುಮಾರಿಗೆ 200 ಮೀಟರ್ ಉದ್ದಕ್ಕೆ ಸಮುದ್ರ ತೀರದಲ್ಲಿ ಸುಮಾರು 50 ಮೀಟರ್ ನಷ್ಟು ಸಮುದ್ರ ಹಿಂದಕ್ಕೆ ಸರಿದಿದ್ದು ಹಲವು ಗಂಟೆಗಳ ವರೆಗೂ ಅದೇ ಸ್ಥಿತಿ ಉಳಿದಿತ್ತು. ಇದರಿಂದ ಸ್ಥಳೀಯರಲ್ಲಿ ಗಾಬರಿ ಉಂಟಾಗಿತ್ತು. ಸುನಾಮಿ ಸಂದರ್ಭದಲ್ಲಿ ಸಮುದ್ರ ಹಿಂದಕ್ಕೆ ಹೋಗುವ ಪರಿಪಾಠ ಇದ್ದುದರಿಂದ ಜನರು ಭಯಕ್ಕೊಳಗಾಗಿದ್ದರು. 2004 ಮತ್ತು 2017ರಲ್ಲಿ ಭೂಕಂಪದಿಂದ ಸುನಾಮಿ ಉಂಟಾದ ಸಂದರ್ಭದಲ್ಲಿ ಒಮ್ಮೆಲೇ ಸಮುದ್ರ ಹಿಂದಕ್ಕೆ ಹೋದ ಘಟನೆ ನಡೆದಿತ್ತು. ಶನಿವಾರ ರಾತ್ರಿ ಕಳೆದು ಭಾನುವಾರ, ಸೋಮವಾರದ ವೇಳೆಗೆ ಸಮುದ್ರ ಎಂದಿನಂತೆ ಭೋರ್ಗರೆಯುತ್ತಾ ತೀರಕ್ಕೆ ಬಂದಿದ್ದು ಸಹಜವಾಗಿತ್ತು.
കോഴിക്കോട് നൈനാംവളപ്പ് ഭാഗത്ത് കടൽ ഉൾവലിഞ്ഞ ദൃശ്യം#Kozhikode #Kerala pic.twitter.com/JQDGq4uUHA
— News18 Kerala (@News18Kerala) October 29, 2022
For several hours on Saturday evening the sea receded up to 50 metres at the Kothi Beach near Nainamvalappu in Kozhikode. The Kerala State Disaster Management Authority ruled out the possibility of a Tsunami as the withdrawal of sea is normally treated as a natural warning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm