ಬ್ರೇಕಿಂಗ್ ನ್ಯೂಸ್
01-11-22 03:04 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.1: ಮೋರ್ಬಿ ತೂಗುಸೇತುವೆ ಕುಸಿದು ಬಿದ್ದಿರುವುದಕ್ಕೆ ಗುಜರಾತ್ ಸರಕಾರದ ಅತಿಯಾದ ಭ್ರಷ್ಟಾಚಾರ ಕಾರಣ. ಸೇತುವೆ ದುರಸ್ತಿ ಬಗ್ಗೆ ಅನುಭವ ಇಲ್ಲದ ಗಡಿಯಾರ ಕಂಪನಿಗೆ ಸೇತುವೆ ದುರಸ್ತಿ ಹೊಣೆ ವಹಿಸಿದ್ದು ಯಾಕೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಗುಜರಾತ್ ಸರಕಾರದ ಭ್ರಷ್ಟಾಚಾರದ ಕಾರಣ ಜನರು ಸಾಯುವ ಸ್ಥಿತಿಯಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಗುಜರಾತ್ ಸರಕಾರ ವಿಸರ್ಜಿಸಿ, ಮುಖ್ಯಮಂತ್ರಿ ರಾಜಿನಾಮೆ ನೀಡಬೇಕು. ಕೂಡಲೇ ಜನರೆದುರು ಹೋಗಿ ಚುನಾವಣೆ ಎದುರಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಸತ್ತವರ ಜೀವ ಮರಳಿ ಬರುವುದಿಲ್ಲ ; ಠಾಕ್ರೆ
ಗುಜರಾತ್ ಸರಕಾರ ತನ್ನ ಹೊಣೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಇವರು ಹೊಣೆ ಜಾರಿಸಿಕೊಂಡ ಮಾತ್ರಕ್ಕೆ ಸತ್ತವರ ಜೀವ ಮರಳಿ ಬರುವುದಿಲ್ಲ ಎಂದು ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಈ ಘಟನೆಯನ್ನು ಮೋಸದ ನಾಟಕ ಎನ್ನಬೇಕೇ, ಸಂಚು ಅಥವಾ ಘೋರ ದುರಂತ ಎನ್ನಬೇಕೇ.. ಸೇತುವೆ ಹೊಣೆ ಹೊತ್ತಿದ್ದ ಕಂಪನಿಯನ್ನು ಹೊಣೆಗಾರನನ್ನಾಗಿಸಿ ತನಿಖೆ ನಡೆಸಬೇಕು. ಹಾಗಂತ, ಗುಜರಾತ್ ಸರಕಾರ ಇದರಿಂದ ದೂರ ಉಳಿಯುವಂತಿಲ್ಲ. ಜನರ ರಕ್ಷಣೆ ಸರಕಾರದ್ದಾಗಿರುತ್ತದೆ ಎಂದು ಸಾಮ್ನಾ ಪತ್ರಿಕೆಯಲ್ಲಿ ಉದ್ಧವ್ ಠಾಕ್ರೆ ಬರೆದಿದ್ದಾರೆ.

ಈ ನಡುವೆ, ಮೋರ್ಬಿ ಸೇತುವೆ ಕುಸಿತ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಮುಖ್ಯ ನ್ಯಾಯಮೂರ್ತಿ ನ.14ರಂದು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಬೇಡಿಕೆ ಇಡಲಾಗಿದೆ.
Delhi Chief Minister Arvind Kejriwal on Tuesday said the Morbi bridge collapse in Gujarat, which has claimed 135 lives so far, was a result of “massive corruption”. “Why was a watchmaking company which had no experience of bridge construction allowed to do so?” he said during a press conference.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm