ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.



ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm