ಬ್ರೇಕಿಂಗ್ ನ್ಯೂಸ್
04-11-22 04:30 pm HK News Desk ದೇಶ - ವಿದೇಶ
ನವದೆಹಲಿ, ನ.4 : ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ನ.4ರಿಂದಲೇ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ್ದರೆ, 50 ಪರ್ಸೆಂಟ್ ಸರಕಾರಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು ಸರ್ಕಾರವು ವಾಹನಗಳ ನಿಯಂತ್ರಣಕ್ಕೂ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಮುಂದಿನ ಆದೇಶದ ವರೆಗೆ ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ. ಇದಲ್ಲದೆ ಉನ್ನತ ವರ್ಗದ ವಿದ್ಯಾರ್ಥಿಗಳ ಹೊರಾಂಗಣ ಚಟುವಟಿಕೆಗಳಿಗೂ ಕಡಿವಾಣ ಹಾಕಲಾಗಿದೆ. ತೀವ್ರ ವಾಯು ಮಾಲಿನ್ಯದ ಕಾರಣ ಜನಜೀವನ ದುಸ್ತರಗೊಂಡಿದ್ದು ಸರಕಾರ, ಆಡಳಿತದ ವಿರುದ್ಧ ಹಿಡಿಶಾಪ ಹಾಕಿದ್ದಾರೆ.

ವಾಯು ಮಾಲಿನ್ಯಕ್ಕೆ ಪಂಜಾಬ್ ಭಾಗದಲ್ಲಿ ರೈತರು ಹೊಲಗಳನ್ನು ಬೆಂಕಿಯಿಟ್ಟು ಸುಡುವುದು ಕಾರಣ ಎನ್ನಲಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಗರಂ ಆಗಿರುವ ಕೇಜ್ರಿವಾಲ್, ರಾಜಕೀಯ ಅಥವಾ ಟೀಕೆ ಮಾಡಲು ಇದು ಸಮಯವಲ್ಲ ಎಂದಿದ್ದಾರೆ.
ಇದಲ್ಲದೆ, ಎಲ್ಲ ರೀತಿಯ ವಾಣಿಜ್ಯ ಮಾದರಿಯ ವಾಹನಗಳು, ಟ್ರಕ್, ಲಾರಿಗಳ ಸಂಚಾರವನ್ನು ನಿಷೇಧಿಸಿದೆ. ರಸ್ತೆ, ಫ್ಲೈ ಓವರ್ ಕಾಮಗಾರಿಗಳನ್ನೂ ನಿರ್ಬಂಧಿಸಲಾಗಿದೆ. ಸರಕಾರಿ ನೌಕರರಿಗೆ ನೀಡಿದಂತೆ ಖಾಸಗಿ ಕಂಪನಿಗಳು ಕೂಡ 50 ಶೇಕಡ ಸಿಬಂದಿಯನ್ನು ಮನೆಯಿಂದಲೇ ದುಡಿಸಿಕೊಳ್ಳುವಂತೆ ಸರಕಾರ ನಿರ್ದೇಶನ ನೀಡಿದೆ.
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರವಾಗಿದ್ದರಿಂದ ವಕೀಲರೊಬ್ಬರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಾಧೀಶ ಯುಯು ಲಲಿತ್ ಅವರಲ್ಲಿ ತುರ್ತು ಪರಿಗಣಿಸುವಂತೆ ಕೋರಿದ್ದಾರೆ. ಕೋರ್ಟ್, ನ.10ರಂದು ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.
Primary schools in Delhi will be closed from tomorrow, Chief Minister Arvind Kejriwal announced on Friday as air pollution in the city worsened.The CM also said that the govt is contemplating on having odd even scheme to check the pollution. Schools will remain open for secondary and highest secondary students, but no outdoor activities will be permitted. Addressing the press conference, Delhi CM Arvind Kejriwal and Punjab CM Bhagwant Mann took responsibility for the excessive stubble burning that has led to a decline in air quality over the last few days.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm