ಬ್ರೇಕಿಂಗ್ ನ್ಯೂಸ್
04-11-22 04:30 pm HK News Desk ದೇಶ - ವಿದೇಶ
ನವದೆಹಲಿ, ನ.4 : ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ನ.4ರಿಂದಲೇ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿದ್ದರೆ, 50 ಪರ್ಸೆಂಟ್ ಸರಕಾರಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು ಸರ್ಕಾರವು ವಾಹನಗಳ ನಿಯಂತ್ರಣಕ್ಕೂ ಕ್ರಮ ಕೈಗೊಂಡಿದೆ. ಇದರ ನಡುವೆಯೇ ಮುಂದಿನ ಆದೇಶದ ವರೆಗೆ ದೆಹಲಿಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ. ಇದಲ್ಲದೆ ಉನ್ನತ ವರ್ಗದ ವಿದ್ಯಾರ್ಥಿಗಳ ಹೊರಾಂಗಣ ಚಟುವಟಿಕೆಗಳಿಗೂ ಕಡಿವಾಣ ಹಾಕಲಾಗಿದೆ. ತೀವ್ರ ವಾಯು ಮಾಲಿನ್ಯದ ಕಾರಣ ಜನಜೀವನ ದುಸ್ತರಗೊಂಡಿದ್ದು ಸರಕಾರ, ಆಡಳಿತದ ವಿರುದ್ಧ ಹಿಡಿಶಾಪ ಹಾಕಿದ್ದಾರೆ.

ವಾಯು ಮಾಲಿನ್ಯಕ್ಕೆ ಪಂಜಾಬ್ ಭಾಗದಲ್ಲಿ ರೈತರು ಹೊಲಗಳನ್ನು ಬೆಂಕಿಯಿಟ್ಟು ಸುಡುವುದು ಕಾರಣ ಎನ್ನಲಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಕೇಂದ್ರ, ರಾಜ್ಯ ಸರಕಾರಗಳು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಗರಂ ಆಗಿರುವ ಕೇಜ್ರಿವಾಲ್, ರಾಜಕೀಯ ಅಥವಾ ಟೀಕೆ ಮಾಡಲು ಇದು ಸಮಯವಲ್ಲ ಎಂದಿದ್ದಾರೆ.
ಇದಲ್ಲದೆ, ಎಲ್ಲ ರೀತಿಯ ವಾಣಿಜ್ಯ ಮಾದರಿಯ ವಾಹನಗಳು, ಟ್ರಕ್, ಲಾರಿಗಳ ಸಂಚಾರವನ್ನು ನಿಷೇಧಿಸಿದೆ. ರಸ್ತೆ, ಫ್ಲೈ ಓವರ್ ಕಾಮಗಾರಿಗಳನ್ನೂ ನಿರ್ಬಂಧಿಸಲಾಗಿದೆ. ಸರಕಾರಿ ನೌಕರರಿಗೆ ನೀಡಿದಂತೆ ಖಾಸಗಿ ಕಂಪನಿಗಳು ಕೂಡ 50 ಶೇಕಡ ಸಿಬಂದಿಯನ್ನು ಮನೆಯಿಂದಲೇ ದುಡಿಸಿಕೊಳ್ಳುವಂತೆ ಸರಕಾರ ನಿರ್ದೇಶನ ನೀಡಿದೆ.
ಇದೇ ವೇಳೆ, ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರವಾಗಿದ್ದರಿಂದ ವಕೀಲರೊಬ್ಬರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಾಧೀಶ ಯುಯು ಲಲಿತ್ ಅವರಲ್ಲಿ ತುರ್ತು ಪರಿಗಣಿಸುವಂತೆ ಕೋರಿದ್ದಾರೆ. ಕೋರ್ಟ್, ನ.10ರಂದು ಈ ಬಗ್ಗೆ ವಿಚಾರಣೆ ನಡೆಸುವುದಾಗಿ ಹೇಳಿದೆ.
Primary schools in Delhi will be closed from tomorrow, Chief Minister Arvind Kejriwal announced on Friday as air pollution in the city worsened.The CM also said that the govt is contemplating on having odd even scheme to check the pollution. Schools will remain open for secondary and highest secondary students, but no outdoor activities will be permitted. Addressing the press conference, Delhi CM Arvind Kejriwal and Punjab CM Bhagwant Mann took responsibility for the excessive stubble burning that has led to a decline in air quality over the last few days.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm