ಬ್ರೇಕಿಂಗ್ ನ್ಯೂಸ್
05-11-22 05:56 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.5:ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು 5 ಸೀಟನ್ನೂ ಗೆಲ್ಲುವುದಿಲ್ಲ. ಈ ಬಗ್ಗೆ ನಾನು ಬರೆದು ಕೊಡುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂಡಿಯಾ ಡುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅರವಿಂದ ಕೇಜ್ರಿವಾಲ್ ಈ ಮಾತು ಹೇಳಿದ್ದಾರೆ. ನಾವು ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಅದು ಹೆಚ್ಚೆಂದರೆ ಐದು ಸೀಟಿಗಿಂತ ಕಡಿಮೆ ಗೆಲ್ಲಬಹುದಷ್ಟೇ ಎಂದು ಹೇಳಿದ್ದಾರೆ. ಗುಜರಾತಿನ ಜನರು ಬದಲಾವಣೆ ಬಯಸಿದ್ದಾರೆ. ಜನ ಬದಲಾವಣೆ ಬಯಸದೇ ಇದ್ದರೆ, ನಮಗೆ ಅಲ್ಲಿ ಜಾಗವೇ ಇರುತ್ತಿರಲಿಲ್ಲ. ನಾವು ಗುಜರಾತಿನಲ್ಲಿ 30 ಶೇಕಡಾ ಮತಗಳನ್ನು ಪಡೆಯುತ್ತೇವೆ. ಪಂಜಾಬ್ ಸರಕಾರ ರಚನೆ ಮಾಡಿದ್ದೇವೆ. ಗುಜರಾತಿನಲ್ಲೂ ಏನೋ ಒಂದು ಹೊಸತು ಆಗಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ 5 ಸೀಟಿಗಿಂತ ಹೆಚ್ಚು ಗೆಲ್ಲುವುದಿಲ್ಲ ಅನ್ನುವುದನ್ನು ಕಾಗದದಲ್ಲಿ ಬರೆದುಕೊಡುತ್ತೇನೆ. ನನ್ನ ಮಾತು ದಾಖಲೆ ಆಗಿರುತ್ತದೆ. ನಾವು ಅಲ್ಲಿ ಎರಡನೇ ಸ್ಥಾನದಲ್ಲಿರುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಆಪ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಖಚಿತವಾಗಿ ಹೇಳಿಲ್ಲ. ಎರಡನೇ ಸ್ಥಾನದಲ್ಲಂತೂ ಪಕ್ಷ ಇರಲಿದೆ ಎಂದಿದ್ದಾರೆ.
ಬಿಜೆಪಿ ಹಿಂದಿಗಿಂತ 20 ಶೇಕಡಾ ಮತಗಳನ್ನು ಕಳಕೊಳ್ಳಲಿದೆ. ನಮ್ಮ ಆಂತರಿಕ ಸರ್ವೇಯಲ್ಲಿ ಮತಗಳು ಆಮ್ ಆದ್ಮಿ ಪಾಲಾಗುವುದು ಕಂಡುಬಂದಿದೆ. ಕಾಂಗ್ರೆಸ್ ಪಾಲಿಗೆ ಮತ ಹೋಗಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ತಯಾರಾಗುತ್ತೀರಾ ಎಂಬ ಪ್ರಶ್ನೆಗೆ, ಲೋಕಸಭೆ ಚುನಾವಣೆಗೆ ಇನ್ನೂ ಕಾಲ ಇದೆ, ಈಗ ಗುಜರಾತ್ ಚುನಾವಣೆ ಎದುರಿಸುತ್ತಿದ್ದೇವೆ ಎಂದಿದ್ದಾರೆ.
The Congress will get fewer than five seats in Gujarat, Delhi chief minister Arvind Kejriwal declared Saturday. Speaking at a media conclave hosted by India Today in the national capital, the AAP boss panned his rival's chances ahead of next month's polls and asked 'who takes the Congress seriously'.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm