ಬ್ರೇಕಿಂಗ್ ನ್ಯೂಸ್
06-11-22 11:43 am HK News Desk ದೇಶ - ವಿದೇಶ
ಅಹ್ಮದಾಬಾದ್, ನ.6: 135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ದುರಂತಕ್ಕೆ ದುರಸ್ತಿ ಕಾರ್ಯ ಕೈಗೊಂಡಿದ್ದ ಅಜಂತಾ ಒರೆವಾ ಕಂಪನಿಯ ಭ್ರಷ್ಟಾಚಾರವೇ ಕಾರಣ ಎನ್ನುವ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ತೂಗು ಸೇತುವೆಯನ್ನು ಸಾರ್ವಜನಿಕ ಸಂಚಾರ ನಿಷೇಧಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಅಜಂತಾ ಒರೆವಾ ಕಂಪನಿಗೆ ವಹಿಸಲಾಗಿತ್ತು. ಆದರೆ ತೂಗು ಸೇತುವೆ ದುರಸ್ತಿ ಅನುಭವ ಹೊಂದಿಲ್ಲದ ಒರೆವಾ ಕಂಪನಿ ಬೇರೊಂದು ಕಂಪನಿಗೆ ಉಪ ಗುತ್ತಿಗೆ ನೀಡಿತ್ತು. ಇದಕ್ಕಾಗಿ ಮೋರ್ಬಿ ನಗರ ಪಾಲಿಕೆಯು ಖಾಸಗಿ ಕಂಪನಿಗೆ ಎರಡು ಕೋಟಿ ರೂಪಾಯಿ ನೀಡಿತ್ತು. ಆದರೆ ಕಂಪನಿಯು ಎರಡು ಕೋಟಿ ಮೊತ್ತದಲ್ಲಿ ಏಳು ತಿಂಗಳ ಅವಧಿಯಲ್ಲಿ ಕೇವಲ 12 ಲಕ್ಷ ರೂಪಾಯಿ ಮೊತ್ತವನ್ನು ಮಾತ್ರ ದುರಸ್ತಿ ಕಾರ್ಯಕ್ಕೆ ವಹಿಸಿತ್ತು. ಅಂದರೆ ಕೇವಲ ಆರು ಶೇಕಡಾ ಮೊತ್ತವನ್ನು ಮಾತ್ರ ವ್ಯಯಿಸಿತ್ತು ಎನ್ನುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹೀಗಾಗಿ ಓರೆವಾ ಕಂಪನಿಯ ಭ್ರಷ್ಟಾಚಾರದಿಂದಲೇ ತೂಗು ಸೇತುವೆ ಕುಸಿದು ಬೀಳುವಂತಾಗಿದೆ. ಉಪ ಗುತ್ತಿಗೆ ಪಡೆದಿದ್ದ ದೇವಪ್ರಕಾಶ್ ಸೊಲ್ಯುಷನ್ಸ್ ಕಂಪನಿಯಿಂದ ದುರಸ್ತಿ ಕಾರ್ಯಕ್ಕೆ ವ್ಯಯಿಸಿದ್ದ ಮೊತ್ತದ ಕುರಿತು ದಾಖಲೆಗಳನ್ನು ಪೊಲೀಸರು ಪಡೆದಿದ್ದಾರೆ. ಈ ವೇಳೆ, ಕೇವಲ 12 ಲಕ್ಷ ರೂ. ಮೊತ್ತವನ್ನಷ್ಟೇ ಖರ್ಚು ಮಾಡಿರುವುದು ತಿಳಿದುಬಂದಿದೆ. ಹೀಗಿದ್ದರೂ ಗುಜರಾತಿನ ಹೊಸ ವರ್ಷ ಅಕ್ಟೋಬರ್ 24 ಮತ್ತು ದೀಪಾವಳಿ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆಂದು ತರಾತುರಿಯಲ್ಲಿ ಸೇತುವೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಮಾಡಲಾಗಿತ್ತು. ಆದರೆ ಅತಿಯಾದ ಜನ ದಟ್ಟಣೆಯಿಂದಾಗಿ ಸೇತುವೆ ಕುಸಿದು ಬಿದ್ದಿತ್ತು. ಇದಕ್ಕೆ ಅಜಂತಾ ಒರೆವಾ ಕಂಪನಿಯೇ ಹೊಣೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಅಹ್ಮದಾಬಾದ್ ಮೂಲದ ಅಜಂತಾ ಓರೆವಾ ಕಂಪನಿಗೆ ತೂಗು ಸೇತುವೆಯ ನಿರ್ವಹಣಾ ಗುತ್ತಿಗೆಯನ್ನು 15 ವರ್ಷಕ್ಕೆ ನೀಡಲಾಗಿತ್ತು. ಕಂಪನಿಯ ಅಧ್ಯಕ್ಷ ಜಯಸುಖ್ ಪಟೇಲ್ ಈ ಗುತ್ತಿಗೆಯನ್ನು ಪಡೆದಿದ್ದರು. ಮೇಲ್ನೋಟಕ್ಕೆ ತೂಗು ಸೇತುವೆ ಹೆಸರಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ಕಂಡುಬಂದಿದ್ದು ಮೋರ್ಬಿ ನಗರ ಪಾಲಿಕೆಯ ಅಧಿಕಾರಿಗಳನ್ನೂ ದುರಂತಕ್ಕೆ ಹೊಣೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ಮೋರ್ಬಿ ಸೇತುವೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಮೋರ್ಬಿ ಪುರಸಭೆಯ ಮುಖ್ಯಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.
The shocking collapse of the 143-year-old Morbi suspension footbridge in Gujarat can be termed one of the most tragic events in the recent past. The mishap that occurred on October 30 claimed 135 lives.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm