ಬ್ರೇಕಿಂಗ್ ನ್ಯೂಸ್
06-11-22 07:46 pm HK News Desk ದೇಶ - ವಿದೇಶ
ತಿರುಪತಿ, ನ.6: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ತನ್ನ ಆಸ್ತಿ ವಿವರ ಘೋಷಿಸಿದ್ದು, ರೂ.15 ಸಾವಿರ ಕೋಟಿ ನಗದು, 10.3 ಟನ್ ಚಿನ್ನ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸುಮಾರು ರೂ. 5,300 ಕೋಟಿ ಠೇವಣಿಯನ್ನು ಹೊಂದಿದ್ದಾಗಿ ತಿಳಿಸಿದೆ.
ಈ ಬಗ್ಗೆ ಖಾಸಗಿ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಟಿಟಿಡಿ ಅಧಿಕಾರಿ ಎವಿ ಧರ್ಮಾ ರೆಡ್ಡಿ, ದೇವಾಲಯದ ಒಟ್ಟು ಆಸ್ತಿ 2.26 ಲಕ್ಷ ಕೋಟಿ ರೂಪಾಯಿ ತಲುಪಿರುವುದಾಗಿ ಹೇಳಿದ್ದಾರೆ.
2019ರಿಂದ ವಿವಿಧ ರೂಪಗಳಲ್ಲಿ ಟಿಟಿಡಿಯಿಂದ ರೂ. 15,938 ಕೋಟಿ ಹೂಡಿಕೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಹೂಡಿಕೆ ರೂ. 2,900 ಕೋಟಿ ಹೆಚ್ಚಾಗಿದೆ ಎಂದವರು ತಿಳಿಸಿದ್ದಾರೆ.
ಬ್ಯಾಂಕ್ಗಳಲ್ಲಿ ಚಿನ್ನದ ಠೇವಣಿ 2.9 ಟನ್ ಹೆಚ್ಚಾಗಿದ್ದು, 2019ರಲ್ಲಿ 7.3 ಟನ್ ಇತ್ತು. ಹೆಚ್ಚುವರಿ ಆದಾಯವನ್ನು ಆಂಧ್ರಪ್ರದೇಶ ಸರ್ಕಾರದ ಭದ್ರತಾ ಠೇವಣಿಗಳಲ್ಲಿ ಹೂಡಿಕೆ ಮಾಡಲಿದೆ ಎನ್ನುವ ವರದಿಗಳನ್ನು ಟಿಟಿಡಿ ಪ್ರತಿನಿಧಿಗಳು ನಿರಾಕರಿಸಿದ್ದಾರೆ.
ವಿವಿಧ ಕಡೆ 7,123 ಎಕರೆ ಆಸ್ತಿಯನ್ನು ಅಥವಾ 960 ಸ್ವತ್ತುಗಳನ್ನು ದೇವಾಲಯ ಹೊಂದಿದೆ. ಪ್ರತಿನಿತ್ಯ 50 ಸಾವಿರದಿಂದ 1 ಲಕ್ಷ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ನ.5ರಂದು 82 ಸಾವಿರ ಭಕ್ತರು ಭೇಟಿ ನೀಡಿದ್ದಾರೆ. ಉದ್ಯಮಿಗಳು, ಸಿನಿಮಾ ತಾರೆಯರು, ಜನಪ್ರಿಯ ವ್ಯಕ್ತಿಗಳು, ರಾಜಕಾರಣಿಗಳು ಹೆಚ್ಚಾಗಿ ತಿರುಪತಿಯಲ್ಲಿ ದೊಡ್ಡ ಮೊತ್ತದ ಸೇವೆ ಸಲ್ಲಿಸುತ್ತಾರೆ ಎಂದು ಧರ್ಮಾ ರೆಡ್ಡಿ ಮಾಹಿತಿ ನೀಡಿದ್ದಾರೆ.
The net worth of the Lord Venkateswara temple, believed to be one of the richest in India, is pegged at Rs 2.26 lakh crore. Tirupati temple trust has declared assets over 10 tonnes of gold and Rs 15,938 crores in cash. The trust, however, called social media reports that TTD had decided to invest surplus funds in the securities and bonds of the Andhra Pradesh government false and incorrect.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm