ಬ್ರೇಕಿಂಗ್ ನ್ಯೂಸ್
07-11-22 05:28 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.7: ಮೋರ್ಬಿ ಸೇತುವೆ ದುರಂತದ ಬಗ್ಗೆ ಗುಜರಾತ್ ಸರಕಾರಕ್ಕೆ ನೋಟೀಸ್ ಜಾರಿ ಮಾಡಿರುವ ಹೈಕೋರ್ಟ್, ವಾರದೊಳಗೆ ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ಆಶುತೋಷ್ ಶಾಸ್ತ್ರಿ ಅವರಿದ್ದ ನ್ಯಾಯಪೀಠವು, ರಾಜ್ಯದ ಮುಖ್ಯ ಕಾರ್ಯದರ್ಶಿಯಿಂದಲೂ ವರದಿ ಕೇಳಿದೆ. ನಾವು ದುರಂತ ಎದುರುಗೊಂಡು ಹೊಸ ವರ್ಷವನ್ನು ಆಚರಿಸುತ್ತಿರುವುದು ನೋವುಂಟು ಮಾಡಿದೆ. ದುರಂತ ಘಟನೆ ಬಗ್ಗೆ ಒಂದು ವರ್ಷದೊಳಗೆ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇವೆ. ಇದಕ್ಕಾಗಿ ಸರಕಾರದ ಕಡೆಯಿಂದ ಯಾವ ರೀತಿ ಕ್ರಮ ಕೈಗೊಂಡಿದ್ದೀರಿ ಅಥವಾ ಕ್ರಮ ಕೈಗೊಂಡಿಲ್ಲ ಎನ್ನುವ ಬಗ್ಗೆ ತಿಳಿಯಬಯಸುತ್ತೇವೆ ಎಂದು ಹೇಳಿದೆ. ಸರಕಾರದ ಪರ ಹಾಜರಿದ್ದ ವಕೀಲ ಕುಮಾರ್ ತ್ರಿವೇದಿ, ರಾಜ್ಯ ಸರಕಾರದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದು ನೋಟೀಸಿಗೆ ಉತ್ತರಿಸುವುದಾಗಿ ತಿಳಿಸಿದ್ದಾರೆ.
ಪ್ರಕರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ನ.14ರ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ. ಅಲ್ಲದೆ, ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿರುವುದಾಗಿ ಹೇಳಿರುವ ನ್ಯಾಯಪೀಠವು, ಇದಕ್ಕೆ ಸಂಬಂಧಿಸಿ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ. ಪಿಐಎಲ್ ವಿಚಾರಣೆಯನ್ನು ನ.14ರಂದೇ ಕೋರ್ಟ್ ನಡೆಸಲಿದೆ. ಅ.30ರಂದು ಪಶ್ಚಿಮ ಗುಜರಾತಿನ ಮೋರ್ಬಿ ಜಿಲ್ಲೆಯಲ್ಲಿ ಶತಮಾನದಷ್ಟು ಹಳೆಯದಾದ ತೂಗು ಸೇತುವೆಯು ಜನ ದಟ್ಟಣೆಯಿಂದಾಗಿ ಕುಸಿದು ಬಿದ್ದು 135 ಜನರು ಮೃತಪಟ್ಟಿದ್ದರು.
The Gujarat High Court has taken a suo motu cognizance of the Morbi bridge collapse incident, issuing a notice to the state government officials including the Home Department, Urban Housing department, the Morbi Municipality, and the State Human Rights Commission. The high court has sought a report from the state, within a week, on the accident in Morbi that claimed more than 130 lives. Among those who had died were more than 40 children.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm