ಬ್ರೇಕಿಂಗ್ ನ್ಯೂಸ್
08-11-22 04:52 pm HK News Desk ದೇಶ - ವಿದೇಶ
ನವದೆಹಲಿ, ನ.8: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಪರಿಣಾಮವಾಗಿ ಎಟಿಎಂ ಸೇರಿದಂತೆ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 19ರಂದು ಮುಷ್ಕರದಲ್ಲಿ ಭಾಗಿಯಾಗುವಂತೆ ಎಐಬಿಇಎ ತನ್ನ ಸದಸ್ಯರಿಗೆ ಕರೆ ನೀಡಿರುವುದು ಗಮನಕ್ಕೆ ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ತಿಳಿಸಿದೆ.

ಕಚೇರಿಗಳು ಮತ್ತು ಶಾಖೆಗಳಲ್ಲಿ ಬ್ಯಾಂಕಿಂಗ್ ಸೇವೆಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ. ಆದಾಗ್ಯೂ, ಮುಷ್ಕರ ತೀವ್ರಗೊಂಡಲ್ಲಿ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂದು ಬ್ಯಾಂಕ್ ಆಫ್ ಬರೋಡ ಹೇಳಿದೆ.
ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಮತ್ತು ಒಕ್ಕೂಟದಲ್ಲಿ ಸಕ್ರಿಯರಾಗಿರುವ ಬ್ಯಾಂಕ್ ಉದ್ಯೋಗಿಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿ ನವೆಂಬರ್ 19ರಂದು ಮುಷ್ಕರ ಹಮ್ಮಿಕೊಳ್ಳುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಈ ಹಿಂದೆ ಅಕ್ಟೋಬರ್ನಲ್ಲಿ ತಿಳಿಸಿದ್ದರು.

ನವೆಂಬರ್ 19 ಮೂರನೇ ಶನಿವಾರ. ಬ್ಯಾಂಕುಗಳು ಸಾಮಾನ್ಯವಾಗಿ ಮೊದಲ ಶನಿವಾರ ಮತ್ತು ಮೂರನೇ ಶನಿವಾರ ತೆರೆದಿರುತ್ತವೆ. ಮುಷ್ಕರದಿಂದಾಗಿ ಈ ತಿಂಗಳ ಮೂರನೇ ಶನಿವಾರದಂದು ನವೆಂಬರ್ 19 ರಂದು ಬ್ಯಾಂಕ್ ಕಾರ್ಯಾಚರಣೆಗಳು ಮತ್ತು ಎಟಿಎಂ ಸೇವೆಗಳು ವ್ಯತ್ಯಯಗೊಳ್ಳಲಿವೆ. ಮರುದಿನ ಭಾನುವಾರವಾದ್ದರಿಂದ ಬ್ಯಾಂಕ್ಗಳು ತೆರೆದಿರುವುದಿಲ್ಲ.
ಬ್ಯಾಂಕ್ ಗ್ರಾಹಕರು ಆನ್ಲೈನ್ ಸೇವೆಗಳನ್ನು ಬಳಸಬಹುದು. ನೀವು ಆನ್ಲೈನ್ ಬ್ಯಾಂಕಿಂಗ್, ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು UPI ಸೇವೆಗಳನ್ನು ಬಳಸಬಹುದು. ಈ ಎಲ್ಲಾ ಸೇವೆಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ. ಬ್ಯಾಂಕಿಗೆ ಹೋಗುವ ಕೆಲಸವಿದ್ದರೆ ಮುಷ್ಕರವನ್ನು ಗಮನದಲ್ಲಿಟ್ಟುಕೊಳ್ಳಬೇಕು.
Banking services, including ATMs, are likely to be affected on November 19 as the All India Bank Employees' Association (AIBEA) have called for a nationwide strike while pressing for their demands.November 19 is the third Saturday of this month and banks remain open on first and third Saturday of every month. Banking institutions across India remain closed on the second and fourth Saturdays of every month.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm