ಬ್ರೇಕಿಂಗ್ ನ್ಯೂಸ್
12-11-22 06:44 pm HK News Desk ದೇಶ - ವಿದೇಶ
ಬೇಗಂಪೇಟ್, ನ.12 : ವಿರೋಧಿಗಳ ಕಡೆಯಿಂದ ನಾನು ನಿತ್ಯವೂ ಸುಮಾರು 2-3 ಕೆಜಿ ಬೈಗುಳಗಳನ್ನು ತಿನ್ನುತ್ತೇನೆ. ಈ ಬೈಗುಳಗಳನ್ನು ಜೀರ್ಣಿಸಿಕೊಳ್ಳುವ ಶಕ್ತಿಯನ್ನು ನನಗೆ ಭಗವಂತ ನೀಡಿದ್ದಾನೆ. ಇದರಿಂದಲೇ ದೇಶಕ್ಕಾಗಿ ಅವಿರತವಾಗಿ ದುಡಿಯುವ ಶಕ್ತಿಯನ್ನು ಗಳಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಗಿ ಹೇಳಿದ್ಧಾರೆ.
ತೆಲಂಗಾಣದ ಬೇಗಂಪೇಟ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಆಡಳಿತಾರೂಢ ಟಿಆರ್ಎಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಹೆಸರನ್ನು ಪ್ರಸ್ತಾಪಿಸದೇ, ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ಆರೋಪವನ್ನು ಪ್ರಧಾನಿ ಮೋದಿ ಹೊರಿಸಿದರು.

ತೆಲಂಗಾಣ ರಾಜ್ಯಕ್ಕೆ "ಜನ ಮೊದಲು, ನಂತರ ಕುಟುಂಬ" ಎಂಬ ನೀತಿಯ ಮೇಲೆ ಕೆಲಸ ಮಾಡುವ ಸರ್ಕಾರದ ಅವಶ್ಯಕತೆಯಿದೆ. ಸದ್ಯ ರಾಜ್ಯದಲ್ಲಿ "ಕುಟುಂಬ ಮೊದಲು, ಜನ ನಂತರ" ಎಂಬ ನೀತಿಯನ್ನು ಹೊಂದಿರುವ ಸರ್ಕಾರವಿದೆ. ತೆಲಂಗಾಣದ ಸರ್ವಾಂಗೀಣ ಅಭಿವೃದ್ಧಿಗೆ ಬದಲಾವಣೆ ಅನಿವಾರ್ಯವಾಗಿದೆ ಎಂದು ಪ್ರಧಾನಿ ಮೋದಿ ಅವರು ಸಿಎಂ ಕೆಸಿಆರ್ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾನು ವಿರೋಧಿಗಳಿಂದ ನಿತ್ಯವೂ 2-3 ಕೆಜಿ ಬೈಗುಳಗಳನ್ನು ತಿನ್ನುತ್ತೇನೆ. ದಿನ ಬೆಳೆಗಾದರೆ ನನ್ನನ್ನು ಬೈಯುವುದೇ ಇವರ ಕಾಯಕವಾಗಿ ಬಿಟ್ಟಿದೆ. ನನ್ನನ್ನು ಜ್ಞಾಪಿಸಿಕೊಳ್ಳದೇ ಹೋದರೆ, ಇವರ ರಾಜಕೀಯ ವ್ಯಾಪಾರ ನಡೆಯುವುದಿಲ್ಲ. ಹೀಗಾಗಿಯೇ ನಾನು ಕೂಡ ಈ ಬೈಗುಳವನ್ನು ಸಹಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ನನಗೆ ಇವರ ಬೈಗುಳಗಳೇ ಶಕ್ತಿ ಎಂದು ಪ್ರಧಾನಿ ಮೋದಿ ವಿರೋಧಿಗಳ ಕಾಲೆಳೆದರು.

ಮೋದಿಯನ್ನು ನಿಂದಿಸಿ, ಬಿಜೆಪಿಯನ್ನು ನಿಂದಿಸಿ, ಆದರೆ ನೀವು ತೆಲಂಗಾಣ ಜನರನ್ನು ನಿಂದಿಸಿದರೆ ಭಾರೀ ಬೆಲೆ ತೆರಬೇಕಾಗುತ್ತದೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದು, ಈ ಬದಲಾವಣೆಗೆ ಮುಂಬರುವ ಲೋಕಸಭೆ ಚುನಾವಣೆ ದಿಕ್ಸೂಚಿಯಾಗಲಿದೆ ಎಂದು ಪ್ರಧಾನಿ ಮೋದಿ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.
ತಮ್ಮ ವಿರುದ್ಧ ತನಿಖಾ ಸಂಸ್ಥೆಗಳು ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲಿವೆ ಎಂಬ ಭಯದಿಂದಲೇ, ವಿರೋಧ ಪಕ್ಷಗಳು ರಾಷ್ಟ್ರೀಯ ಒಕ್ಕೂಟವನ್ನು ರಚಿಸಲು ಪ್ರಯತ್ನಿಸುತ್ತಿವೆ. ಲೋಕಸಭೆ ಚುನಾವಣೆ ಹೊತ್ತಿಗೆ ಯಾವೆಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಿ ಮೋದಿ ವಿರುದ್ಧ ತಿರುಗಿ ಬೀಳುತ್ತವೆ ಎಂಬುದನ್ನು ನೀವೇ ನೋಡಿ ಎಂದು ಪ್ರಧಾನಿ ಲೇವಡಿ ಮಾಡಿದರು.
ಎಲ್ಲರ ಸಹಕಾರ, ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸ ಇದು ಬಿಜೆಪಿಯ ಮೂಲಮಂತ್ರವಾಗಿದ್ದು, ದೇಶದ ಜನ ಬಿಜೆಪಿಯ ಈ ನೀತಿಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ವಿರೋಧ ಪಕ್ಷಗಳು ಮೋದಿಯನ್ನಲ್ಲ, ಈ ದೇಶವನ್ನು ಸೋಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ದೇಶದ ಜನ ಹೀಗಾಗಲು ಬಿಡುವುದಿಲ್ಲ ಎಂಬ ಪೂರ್ಣ ವಿಶ್ವಾಸ ನನ್ನಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi, in an afternoon speech to Bharatiya Janata Party workers at Begumpet airport in Telangana, said he consumes up to “three kilograms” of verbal abuses every day, which he claimed in jest, converts into nutrition. The comment led Telangana Rashtra Samithi leader Y. Sathish Reddy to wryly note on Twitter that while the prime minister has “found a source” of nutrition, crores in India are undernourished
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm