ಬ್ರೇಕಿಂಗ್ ನ್ಯೂಸ್
13-11-22 05:01 pm HK News Desk ದೇಶ - ವಿದೇಶ
ನವದೆಹಲಿ, ನ.13: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಕ್ಕಿಲ್ಲವೆಂದು ಆಮ್ ಆದ್ಮಿ ಪಕ್ಷದ ಮಾಜಿ ಕಾರ್ಪೊರೇಟರ್ ಒಬ್ಬ ಹೈಟೆನ್ಶನ್ ವಿದ್ಯುತ್ ತಂತಿ ಹಾದುಹೋಗುವ ಟವರ್ ಏರಿ ಕುಳಿತ ಘಟನೆ ದೆಹಲಿಯಲ್ಲಿ ನಡೆದಿದೆ.
ಹಸೀಬ್ ಉಲ್ ಹಸನ್ ಟವರ್ ಏರಿ ಕುಳಿತ ವ್ಯಕ್ತಿ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ನಿರಾಕರಿಸಲಾಗಿದೆ. ಅಲ್ಲದೆ, ತನ್ನ ಒರಿಜಿನಲ್ ದಾಖಲೆ ಪ್ರತಿಗಳನ್ನು ತೆಗೆದಿಟ್ಟು ಸ್ವತಂತ್ರ ಸ್ಪರ್ಧೆಗೂ ಅವಕಾಶ ಸಿಗದಂತೆ ಮಾಡಿದ್ದಾರೆ ಎಂದು ಆರೋಪಿಸಿ ಟವರ್ ಏರಿ ಹೈಡ್ರಾಮಾ ನಡೆಸಿದ್ದಾನೆ.
ಅಲ್ಲದೆ, ಆಮ್ ಆದ್ಮಿ ಪಕ್ಷದ ನಾಯಕರಾದ ಆತಿಷಿ, ದುರ್ಗೇಶ್ ಪಾಠಕ್ ಮತ್ತು ಸಂಜಯ್ ಸಿಂಗ್, ತನಗೆ ಟಿಕೆಟ್ ಕೊಡಬೇಕಿದ್ದರೆ ಮೂರು ಕೋಟಿ ರೂಪಾಯಿ ಹಣ ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾರೆ. ನನ್ನಲ್ಲಿ ಅಷ್ಟು ಕೊಡಲು ಹಣ ಇಲ್ಲ. ನನ್ನ ಬದಲಿಗೆ ದೀಪು ಚೌಧರಿ ಬಳಿ ಮೂರು ಕೋಟಿ ರೂಪಾಯಿ ಹಣ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಹಸೀಬುಲ್ ಹಸನ್ ಆರೋಪಿಸಿದ್ದಾನೆ.
ಶಾಸ್ತ್ರಿ ಪಾರ್ಕ್ ವೃತ್ತದಲ್ಲಿ ಘಟನೆ ನಡೆದಿದ್ದು, ಪೊಲೀಸರು, ಆಮ್ ಆದ್ಮಿ ಪಕ್ಷದ ಪ್ರತಿನಿಧಿಗಳು ಆಗಮಿಸಿ ಹಸೀಬುಲ್ ನನ್ನು ಮನವೊಲಿಸಿ ಕೆಳಕ್ಕೆ ಇಳಿಸಿದ್ದಾರೆ. ಹೈಟೆನ್ಶನ್ ವಿದ್ಯುತ್ ಹರಿಯುವ ಟವರ್ ಆಗಿದ್ದರಿಂದ ವಿದ್ಯುತ್ ಸಂಪರ್ಕವನ್ನೂ ಕಡಿತ ಮಾಡಲಾಗಿತ್ತು. ಡಿ.4ರಂದು ದೆಹಲಿ ಪಾಲಿಕೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದಿಂದ 117 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. 250 ಸದಸ್ಯ ಬಲದಲ್ಲಿ 117 ಸ್ಥಾನದ ಟಿಕೆಟ್ ಫೈನಲ್ ಮಾಡಲಾಗಿದ್ದು, ಶನಿವಾರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಹಸೀಬುಲ್ ಗೆ ಸ್ಥಾನ ಸಿಗದೇ ಇರುವುದಕ್ಕೆ ಭಾನುವಾರ ಟವರ್ ಏರಿ ಡ್ರಾಮಾ ನಡೆಸಿದ್ದಾನೆ.
Disgruntled over not being given a ticket to the upcoming civic polls, a former councillor of the Aam Aadmi Party (AAP) on Sunday climbed up a transmission tower in Delhi.Former AAP councillor Haseeb-ul-Hasan was reportedly uphappy after he was denied a ticket to the upcoming Municipal Corporation of Delhi (MCD) elections, and climbed a transmission tower Shashtri Park metro station.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am