ಬ್ರೇಕಿಂಗ್ ನ್ಯೂಸ್
13-10-20 04:06 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯಿ ಕಥರಿಯಾ ಗೋವಿನ ಸೆಗಣಿಯಿಂದ ಮಾಡಿದ ಚಿಪ್ ಅನ್ನು ಹೊರತಂದಿದ್ದಾರೆ. ಮೊಬೈಲ್ ಫೋನ್ ಹೊರಸೂಸುವ ವಿಕಿರಣವನ್ನು ಈ ಚಿಪ್ ತಡೆಯಬಲ್ಲದು. ಆಮೂಲಕ ವಿಕಿರಣ ಸಂಬಂಧಿ ರೋಗಗಳನ್ನು ಈ ಚಿಪ್ ನಿವಾರಿಸಲಿದೆ ಎಂದು ಕಥರಿಯಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಇಲಾಖೆಯಡಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಈ ಹೊಸ ಮಾದರಿಯ ಚಿಪ್ ಅನ್ನು ಬಿಡುಗಡೆ ಮಾಡಲಾಗಿದೆ. ಸಗಣಿ ಉತ್ಪನ್ನಗಳ ಪ್ರಚಾರಕ್ಕಾಗಿ ಆಯೋಗದ ವತಿಯಿಂದ ಕಾಮಧೇನು ದೀಪಾವಳಿ ಹೆಸರಲ್ಲಿ ರಾಷ್ಟ್ರ ಮಟ್ಟದ ಅಭಿಯಾನ ಹಮ್ಮಿಕೊಂಡಿದ್ದು, ಕಥರಿಯಾ ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗೋವಿನ ಸೆಗಣಿ ವಿಕಿರಣ ವಿರೋಧಿಯಾಗಿದ್ದು, ಎಲ್ಲರನ್ನು ಕಾಪಾಡುತ್ತದೆ. ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಈ ಚಿಪ್ ಅನ್ನು ಮೊಬೈಲ್ ಫೋನ್ ಗಳಲ್ಲಿ ಬಳಸಬಹುದು. ಇದರಿಂದ ಮೊಬೈಲ್ ವಿಕಿರಣದಿಂದ ಬರುವ ರೋಗಗಳನ್ನು ನಿಯಂತ್ರಿಸಬಹುದು ಎಂದು ಕಥಿರಿಯಾ ಹೇಳಿದ್ದಾರೆ.
ಹೊಸ ಚಿಪ್ ಗೆ ಗೋಸತ್ವ ಕವಚ ಎಂದು ಹೆಸರಿಡಲಾಗಿದ್ದು ಗುಜರಾತಿನ ರಾಜ್ ಕೋಟ್ ಮೂಲದ ಶ್ರೀಜಿ ಗೋಶಾಲೆಯಲ್ಲಿ ಇದನ್ನು ಆವಿಷ್ಕರಿಸಲಾಗಿದೆ. ಈ ಗೋಶಾಲೆಯನ್ನು ಕಾಮಧೇನು ಆಯೋಗದಿಂದಲೇ 2019ರಲ್ಲಿ ರಚಿಸಲಾಗಿದ್ದು ಗೋವಿನ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಆರಂಭಿಸಲಾಗಿತ್ತು. ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಆಯೋಗದಿಂದ ಗೋವುಗಳ ಉತ್ಪನ್ನದ ಪ್ರಚಾರಕ್ಕಾಗಿ ರಾಷ್ಟ್ರ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ. ಇದೇ ವೇಳೆ, ಈ ಬಾರಿಯ ಹಬ್ಬದ ವೇಳೆ ಚೀನಾ ನಿರ್ಮಿತ ಪಟಾಕಿಗಳನ್ನು ಸುಡುವ ಬದಲು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಕಥರಿಯಾ ಕರೆ ನೀಡಿದ್ದಾರೆ.
Rashtriya Kamdhenu Aayog (RKA) chairman Vallabhbhai Kathiria unveiled a ''chip'' made of cow dung and declared that it reduces radiation from mobile handsets and it will be a protection against all diseases.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm