ಬ್ರೇಕಿಂಗ್ ನ್ಯೂಸ್
18-11-22 02:55 pm HK News Desk ದೇಶ - ವಿದೇಶ
ನವದೆಹಲಿ, ನ.18 : ಭಾರತದ ಮೊಟ್ಟಮೊದಲ ಖಾಸಗಿ ಕಂಪೆನಿ ನಿರ್ಮಿತ ರಾಕೆಟ್ ವಿಕ್ರಮ್- ಸಬ್ ಆರ್ಬಿಟಲ್ (ವಿಕೆಎಸ್) ಯಶಸ್ವಿಯಾಗಿ ಅಂತರಿಕ್ಷಕ್ಕೆ ಉಡಾವಣೆಯಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಬೆಳಗ್ಗೆ 11.30ರ ಸುಮಾರಿಗೆ ಇಸ್ರೋ ಯಶಸ್ವಿ ಉಡಾವಣೆ ಮಾಡಿದೆ.
ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ರಾಕೆಟ್ಗೆ ಭಾರತದ ಬಾಹ್ಯಾಕಾಶ ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇಡಲಾಗಿದೆ. IN-SPACe (ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ) ಅಧ್ಯಕ್ಷರಾದ ಡಾ.ಪವನ್ ಕುಮಾರ್ ಗೋಯೆಂಕಾ ಅವರು ಯಶಸ್ವಿ ರಾಕೆಟ್ ಉಡಾವಣೆ ಪ್ರಯತ್ನವನ್ನು ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ "ಹೊಸ ಮೈಲಿಗಲ್ಲು" ಎಂದು ಕರೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 2020 ರಲ್ಲಿ ಖಾಸಗಿ ಕಂಪನಿಗಳಿಗೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆದ ನಂತರ ಮೊದಲ ಬಾರಿಗೆ ದೇಶೀಯವಾಗಿ ಖಾಸಗಿ ರಾಕೆಟ್ ಉಡಾವಣೆ ಮಾಡಲಾಗಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ರಾಕೆಟ್ ಉಡಾವಣೆ ವೇಳೆ ಪಾಲ್ಗೊಂಡು ತಂಡದೊಂದಿಗಿನ ಫೋಟೋವನ್ನೂ ಹಂಚಿಕೊಂಡಿದ್ದಾರೆ. "ಇದು ನಿಜವಾಗಿಯೂ ಖಾಸಗಿ ಬಾಹ್ಯಾಕಾಶ ವಲಯಕ್ಕೆ ಹೊಸ ಪ್ರಾರಂಭ ಎಂದಿರುವ ಅವರು ಇದು ಭಾರತದ ಸ್ಟಾರ್ಟ್ಅಪ್ ಚಳುವಳಿಯಲ್ಲಿ ಒಂದು ಮಹತ್ವದ ತಿರುವು ಎಂದಿದ್ದಾರೆ.
ಹೈದರಾಬಾದ್ ಮೂಲದ ಸ್ಕೈರೂಟ್ ಅನ್ನು 2018 ರಲ್ಲಿ ಸ್ಥಾಪಿಸಲಾಗಿತ್ತು. ಸಿಂಗಾಪುರದ ಸಾರ್ವಭೌಮ ಸಂಪತ್ತು ನಿಧಿ ಜಿಐಸಿ ಬೆಂಬಲದಲ್ಲಿ ಕಾರ್ಯಾಚರಿಸುತ್ತಿದೆ. ಸರ್ಕಾರವು ಖಾಸಗಿ ಕಂಪನಿಗಳಿಗೆ ಬಾಹ್ಯಾಕಾಶ ವಲಯವನ್ನು ಬಾಗಿಲು ತೆರೆದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಮತ್ತು ಪರೀಕ್ಷಾ ಸೌಲಭ್ಯಗಳನ್ನು ಬಳಸುವ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಪ್ರಯೋಗದ ಮೂಲಕ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶ ಪಡೆದಂತಾಗಿದೆ.
India’s space sector has scaled a new peak on Friday with the successful launch of the country’s first-ever private rocket—Vikram-S Suborbital Flight (Prarambh mission) from Sounding Rocket Complex in Sriharikota, Andhra Pradesh.“Mission Prarambh is successfully accomplished. Congratulations @SkyrootA (Skyroot Aerospace) and Congratulations India,” said a tweet by Indian Space Research Organisation (ISRO).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm