ಬ್ರೇಕಿಂಗ್ ನ್ಯೂಸ್
22-11-22 08:33 pm HK News Desk ದೇಶ - ವಿದೇಶ
ನವದೆಹಲಿ, ನ.22: ಸೌದಿ ಅರೇಬಿಯಾದಲ್ಲಿ ಕದ್ದವರ ಕೈ ಕಡಿಯುವುದು, ಅತ್ಯಾಚಾರ ಎಸಗಿದವರ ಜನನಾಂಗ ಕಡಿಯುವುದು, ಕೊಲೆ ಮಾಡಿದವರ ತಲೆ ಕಡಿಯುವ ಕಾನೂನು ಇದೆ. ಮುಸ್ಲಿಮರ ಷರಿಯಾ ಕಾನೂನಿನಡಿ ಅಲ್ಲಿ ಅಪರಾಧಿಗಳಿಗೆ ಕ್ರೂರ ಶಿಕ್ಷೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇದೇ ಕಾನೂನಿನಡಿ ಕಳೆದ ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆ ಜಾರಿಗೊಳಿಸಲಾಗಿದೆ ಎನ್ನುವ ಸುದ್ದಿ ಬಂದಿದೆ.
ಈ ಬಗ್ಗೆ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದ್ದು, ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆಗೆ ಗುರಿಪಡಿಸಲಾಗಿದೆ. ಅದರಲ್ಲಿ ಮೂರು ಪಾಕಿಸ್ಥಾನೀಯರು, ನಾಲ್ವರು ಸಿರಿಯನ್ನರು, ಇಬ್ಬರು ಜೋರ್ಡಾನ್ ಪ್ರಜೆಗಳು ಮತ್ತು ಮೂವರು ಸೌದಿ ಅರೇಬಿಯಾ ಪ್ರಜೆಗಳಾಗಿದ್ದಾರೆ. ಇಷ್ಟಕ್ಕೂ ಅವರ ಅಪರಾಧ ಏನಿತ್ತೆಂದರೆ, ಅವರು ಅಕ್ರಮವಾಗಿ ಡ್ರಗ್ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿರುವುದು.
ಕಳೆದ ಮಾರ್ಚ್ ಒಂದೇ ತಿಂಗಳಲ್ಲಿ ಸೌದಿಯ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 81 ಮಂದಿಗೆ ಶಿರಚ್ಛೇದ ಶಿಕ್ಷೆಗೆ ಗುರಿ ಪಡಿಸಲಾಗಿದೆ. ಉಗ್ರರಿಗೆ ಬೆಂಬಲ ನೀಡಿದ್ದು ಸೇರಿದಂತೆ ವಿವಿಧ ರೀತಿಯ ಅಪರಾಧಗಳಿಗಾಗಿ ತಲೆ ಕಡಿಯುವ ಶಿಕ್ಷೆ ನೀಡಲಾಗಿದೆ. 2018ರಲ್ಲಿ ಅಮೆರಿಕದ ಪತ್ರಕರ್ತ ಜಮಾಲ್ ಕಶೋಗಿ ಎಂಬಾತನನ್ನು ಸೌದಿಯ ರಾಜನ ಅಪ್ಪಣೆಯಂತೆ ತಲೆ ಕಡಿಯಲಾಗಿತ್ತು. ಈ ಕೃತ್ಯಕ್ಕೆ ಜಗತ್ತಿನಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಆನಂತರ, ಎರಡು ವರ್ಷಗಳಲ್ಲಿ ತಲೆ ಕತ್ತರಿಸುವ ಶಿಕ್ಷೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಇದೀಗ ಮತ್ತೆ ಹಳೆ ಮಾದರಿಯ ಶಿರಚ್ಛೇದ ಶಿಕ್ಷೆ ಜಾರಿ ಮಾಡಲಾಗುತ್ತಿದೆ. 2018ರ ನಂತರ ಕೇವಲ ಕೊಲೆ ಪ್ರಕರಣಗಳಲ್ಲಿ ಆರೋಪ ಸಾಬೀತಾದರೆ ಮಾತ್ರ ಶಿರಚ್ಛೇದ ಶಿಕ್ಷೆ ಜಾರಿಗೊಳಿಸುವ ಬಗ್ಗೆ ಸರಕಾರ ತೀರ್ಮನ ಕೈಗೊಂಡಿತ್ತು. ಆದರೆ ಇತ್ತೀಚೆಗೆ ಅಲ್ಲಿನ ರಾಜನ ನಿಧನಾನಂತರ ಹೊಸ ರಾಜನ ಆಗಮನವಾಗಿದ್ದು, ಹಳೆ ಕಾಲದ ಕ್ರೂರ ಶಿಕ್ಷೆಯೂ ಜಾರಿಗೆ ಬಂದಿದೆ.
Saudi Arabia has reportedly executed 12 people in the last 10 days for drug-related offences. Some of these were beheadings with a sword, a report said. As many as 12 people were sentenced to death after being imprisoned on non-violent drug charges and included three Pakistanis, four Syrians, two Jordanians and three Saudis, the Telegraph reported.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm