ಬ್ರೇಕಿಂಗ್ ನ್ಯೂಸ್
22-11-22 08:33 pm HK News Desk ದೇಶ - ವಿದೇಶ
ನವದೆಹಲಿ, ನ.22: ಸೌದಿ ಅರೇಬಿಯಾದಲ್ಲಿ ಕದ್ದವರ ಕೈ ಕಡಿಯುವುದು, ಅತ್ಯಾಚಾರ ಎಸಗಿದವರ ಜನನಾಂಗ ಕಡಿಯುವುದು, ಕೊಲೆ ಮಾಡಿದವರ ತಲೆ ಕಡಿಯುವ ಕಾನೂನು ಇದೆ. ಮುಸ್ಲಿಮರ ಷರಿಯಾ ಕಾನೂನಿನಡಿ ಅಲ್ಲಿ ಅಪರಾಧಿಗಳಿಗೆ ಕ್ರೂರ ಶಿಕ್ಷೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇದೇ ಕಾನೂನಿನಡಿ ಕಳೆದ ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆ ಜಾರಿಗೊಳಿಸಲಾಗಿದೆ ಎನ್ನುವ ಸುದ್ದಿ ಬಂದಿದೆ.
ಈ ಬಗ್ಗೆ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದ್ದು, ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆಗೆ ಗುರಿಪಡಿಸಲಾಗಿದೆ. ಅದರಲ್ಲಿ ಮೂರು ಪಾಕಿಸ್ಥಾನೀಯರು, ನಾಲ್ವರು ಸಿರಿಯನ್ನರು, ಇಬ್ಬರು ಜೋರ್ಡಾನ್ ಪ್ರಜೆಗಳು ಮತ್ತು ಮೂವರು ಸೌದಿ ಅರೇಬಿಯಾ ಪ್ರಜೆಗಳಾಗಿದ್ದಾರೆ. ಇಷ್ಟಕ್ಕೂ ಅವರ ಅಪರಾಧ ಏನಿತ್ತೆಂದರೆ, ಅವರು ಅಕ್ರಮವಾಗಿ ಡ್ರಗ್ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿರುವುದು.
ಕಳೆದ ಮಾರ್ಚ್ ಒಂದೇ ತಿಂಗಳಲ್ಲಿ ಸೌದಿಯ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 81 ಮಂದಿಗೆ ಶಿರಚ್ಛೇದ ಶಿಕ್ಷೆಗೆ ಗುರಿ ಪಡಿಸಲಾಗಿದೆ. ಉಗ್ರರಿಗೆ ಬೆಂಬಲ ನೀಡಿದ್ದು ಸೇರಿದಂತೆ ವಿವಿಧ ರೀತಿಯ ಅಪರಾಧಗಳಿಗಾಗಿ ತಲೆ ಕಡಿಯುವ ಶಿಕ್ಷೆ ನೀಡಲಾಗಿದೆ. 2018ರಲ್ಲಿ ಅಮೆರಿಕದ ಪತ್ರಕರ್ತ ಜಮಾಲ್ ಕಶೋಗಿ ಎಂಬಾತನನ್ನು ಸೌದಿಯ ರಾಜನ ಅಪ್ಪಣೆಯಂತೆ ತಲೆ ಕಡಿಯಲಾಗಿತ್ತು. ಈ ಕೃತ್ಯಕ್ಕೆ ಜಗತ್ತಿನಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಆನಂತರ, ಎರಡು ವರ್ಷಗಳಲ್ಲಿ ತಲೆ ಕತ್ತರಿಸುವ ಶಿಕ್ಷೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಇದೀಗ ಮತ್ತೆ ಹಳೆ ಮಾದರಿಯ ಶಿರಚ್ಛೇದ ಶಿಕ್ಷೆ ಜಾರಿ ಮಾಡಲಾಗುತ್ತಿದೆ. 2018ರ ನಂತರ ಕೇವಲ ಕೊಲೆ ಪ್ರಕರಣಗಳಲ್ಲಿ ಆರೋಪ ಸಾಬೀತಾದರೆ ಮಾತ್ರ ಶಿರಚ್ಛೇದ ಶಿಕ್ಷೆ ಜಾರಿಗೊಳಿಸುವ ಬಗ್ಗೆ ಸರಕಾರ ತೀರ್ಮನ ಕೈಗೊಂಡಿತ್ತು. ಆದರೆ ಇತ್ತೀಚೆಗೆ ಅಲ್ಲಿನ ರಾಜನ ನಿಧನಾನಂತರ ಹೊಸ ರಾಜನ ಆಗಮನವಾಗಿದ್ದು, ಹಳೆ ಕಾಲದ ಕ್ರೂರ ಶಿಕ್ಷೆಯೂ ಜಾರಿಗೆ ಬಂದಿದೆ.
Saudi Arabia has reportedly executed 12 people in the last 10 days for drug-related offences. Some of these were beheadings with a sword, a report said. As many as 12 people were sentenced to death after being imprisoned on non-violent drug charges and included three Pakistanis, four Syrians, two Jordanians and three Saudis, the Telegraph reported.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm