ಬ್ರೇಕಿಂಗ್ ನ್ಯೂಸ್
22-11-22 08:33 pm HK News Desk ದೇಶ - ವಿದೇಶ
ನವದೆಹಲಿ, ನ.22: ಸೌದಿ ಅರೇಬಿಯಾದಲ್ಲಿ ಕದ್ದವರ ಕೈ ಕಡಿಯುವುದು, ಅತ್ಯಾಚಾರ ಎಸಗಿದವರ ಜನನಾಂಗ ಕಡಿಯುವುದು, ಕೊಲೆ ಮಾಡಿದವರ ತಲೆ ಕಡಿಯುವ ಕಾನೂನು ಇದೆ. ಮುಸ್ಲಿಮರ ಷರಿಯಾ ಕಾನೂನಿನಡಿ ಅಲ್ಲಿ ಅಪರಾಧಿಗಳಿಗೆ ಕ್ರೂರ ಶಿಕ್ಷೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇದೇ ಕಾನೂನಿನಡಿ ಕಳೆದ ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆ ಜಾರಿಗೊಳಿಸಲಾಗಿದೆ ಎನ್ನುವ ಸುದ್ದಿ ಬಂದಿದೆ.
ಈ ಬಗ್ಗೆ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದ್ದು, ಹತ್ತು ದಿನಗಳಲ್ಲಿ 12 ಮಂದಿಯನ್ನು ತಲೆ ಕಡಿಯುವ ಶಿಕ್ಷೆಗೆ ಗುರಿಪಡಿಸಲಾಗಿದೆ. ಅದರಲ್ಲಿ ಮೂರು ಪಾಕಿಸ್ಥಾನೀಯರು, ನಾಲ್ವರು ಸಿರಿಯನ್ನರು, ಇಬ್ಬರು ಜೋರ್ಡಾನ್ ಪ್ರಜೆಗಳು ಮತ್ತು ಮೂವರು ಸೌದಿ ಅರೇಬಿಯಾ ಪ್ರಜೆಗಳಾಗಿದ್ದಾರೆ. ಇಷ್ಟಕ್ಕೂ ಅವರ ಅಪರಾಧ ಏನಿತ್ತೆಂದರೆ, ಅವರು ಅಕ್ರಮವಾಗಿ ಡ್ರಗ್ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿರುವುದು.
ಕಳೆದ ಮಾರ್ಚ್ ಒಂದೇ ತಿಂಗಳಲ್ಲಿ ಸೌದಿಯ ಇತಿಹಾಸದಲ್ಲೇ ಅತಿ ಹೆಚ್ಚು ಅಂದರೆ 81 ಮಂದಿಗೆ ಶಿರಚ್ಛೇದ ಶಿಕ್ಷೆಗೆ ಗುರಿ ಪಡಿಸಲಾಗಿದೆ. ಉಗ್ರರಿಗೆ ಬೆಂಬಲ ನೀಡಿದ್ದು ಸೇರಿದಂತೆ ವಿವಿಧ ರೀತಿಯ ಅಪರಾಧಗಳಿಗಾಗಿ ತಲೆ ಕಡಿಯುವ ಶಿಕ್ಷೆ ನೀಡಲಾಗಿದೆ. 2018ರಲ್ಲಿ ಅಮೆರಿಕದ ಪತ್ರಕರ್ತ ಜಮಾಲ್ ಕಶೋಗಿ ಎಂಬಾತನನ್ನು ಸೌದಿಯ ರಾಜನ ಅಪ್ಪಣೆಯಂತೆ ತಲೆ ಕಡಿಯಲಾಗಿತ್ತು. ಈ ಕೃತ್ಯಕ್ಕೆ ಜಗತ್ತಿನಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಆನಂತರ, ಎರಡು ವರ್ಷಗಳಲ್ಲಿ ತಲೆ ಕತ್ತರಿಸುವ ಶಿಕ್ಷೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಇದೀಗ ಮತ್ತೆ ಹಳೆ ಮಾದರಿಯ ಶಿರಚ್ಛೇದ ಶಿಕ್ಷೆ ಜಾರಿ ಮಾಡಲಾಗುತ್ತಿದೆ. 2018ರ ನಂತರ ಕೇವಲ ಕೊಲೆ ಪ್ರಕರಣಗಳಲ್ಲಿ ಆರೋಪ ಸಾಬೀತಾದರೆ ಮಾತ್ರ ಶಿರಚ್ಛೇದ ಶಿಕ್ಷೆ ಜಾರಿಗೊಳಿಸುವ ಬಗ್ಗೆ ಸರಕಾರ ತೀರ್ಮನ ಕೈಗೊಂಡಿತ್ತು. ಆದರೆ ಇತ್ತೀಚೆಗೆ ಅಲ್ಲಿನ ರಾಜನ ನಿಧನಾನಂತರ ಹೊಸ ರಾಜನ ಆಗಮನವಾಗಿದ್ದು, ಹಳೆ ಕಾಲದ ಕ್ರೂರ ಶಿಕ್ಷೆಯೂ ಜಾರಿಗೆ ಬಂದಿದೆ.
Saudi Arabia has reportedly executed 12 people in the last 10 days for drug-related offences. Some of these were beheadings with a sword, a report said. As many as 12 people were sentenced to death after being imprisoned on non-violent drug charges and included three Pakistanis, four Syrians, two Jordanians and three Saudis, the Telegraph reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm