ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am