ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm