ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am